ನಾಗ್ಪುರ, ಮಹಾರಾಷ್ಟ್ರ: ಬಿಜೆಪಿಯ ಪ್ರಮುಖ ನಾಯಕರೂ ಆಗಿರುವ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಸುಳಿವು ನೀಡಿದ್ದಾರೆ.
ಇದರೊಂದಿಗೆ ಬಿಜೆಪಿ ಹೈಕಮಾಂಡ್ ಜತೆಗಿನ ಅವರ ಮುನಿಸು ಬಹಿರಂಗಗೊಂಡಿದೆ. ಕೆಲವು ಮೂಲಗಳ ಪ್ರಕಾರ 2024ರ ಚುನಾವಣೆಯಲ್ಲಿ ಗಡ್ಕರಿ ಅವರಿಗೆ ಬಿಜೆಪಿಯು ಟಿಕೆಟ್ ನಿರಾಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ ಅವರು, ತಾವು ಎರಡು ಚುನಾವಣೆಗಳನ್ನು ಗೆದ್ದಿದ್ದರೂ, ಜನರಿಗೆ ತಾನು ಯೋಗ್ಯ ಎನಿಸಿದರೆ ಮಾತ್ರವೇ ವೋಟ್ ಮಾಡಲಿ ಎಂದಿದ್ದಾರೆ. ಒಂದು ಮಿತಿಯನ್ನು ದಾಟಿ ನಾನು ಯಾರನ್ನೂ ಓಲೈಸಲು ಹೋಗುವುದಿಲ್ಲ. ಒಂದು ವೇಳೆ, ನನ್ನ ಜಾಗದಲ್ಲಿ ಮತ್ತೊಬ್ಬರು ಯಾರೇ ಬಂದರೂ ಪರ್ವಾಗಿಲ್ಲ. ಆಗಲೂ ನಾನು ನನ್ನ ಕೆಲಸಕ್ಕೆ ಹೆಚ್ಚು ಸಮಯವನ್ನು ಕೊಡುತ್ತೇನೆ ಎಂದು ಗಡ್ಕರಿ ಅವರು ಹೇಳಿದ್ದರು.
ಇದೇ ವೇಳೆ, ನಿತಿನ್ ಗಡ್ಕರಿ ಅವರ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಯಿಸಿವೆ. ಗಡ್ಕರಿ ಅವರು ಮತಗಳನ್ನು ಪಡೆಯಲು ಓಲೈಕೆ ರಾಜಕಾರಣವನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆಂದು ಗಡ್ಕರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆಯೂ ಸಾರ್ವಜನಿಕ ವೇದಿಕೆಯಲ್ಲಿ ಇದೇ ರೀತಿಯಲ್ಲಿ ಗಡ್ಕರಿ ಅವರು ನಿವೃತ್ತಿಯ ಸುಳಿವು ಬಿಟ್ಟುಕೊಟ್ಟಿದ್ದರು. ಜನವರಿ ತಿಂಗಳಲ್ಲಿ ಆಯೋಜಿಸಲಾಗಿದ್ದ ಹಬ್ಬಾ ಆದಿವಾಸಿ ಮಹಾಸಂಘ ಸದಸ್ಯರ ಸಭೆಯಲ್ಲಿ ಅವರು, ನೀವು ಯಾರಿಗೆ ಬೇಕಾದರೂ ವೋಟ್ ಮಾಡಬಹುದು ಅದು ನಿಮಗೆ ಬಿಟ್ಟ ವಿಷಯ ಎಂದು ಹೇಳಿದ್ದರು. ಆ ಮೂಲಕ ನಾನಾ ಊಹೆಗಳಿಗೆ ಅವಕಾಶ ಕಲ್ಪಿಸಿದ್ದರು.
ಕಳೆದ ವರ್ಷ ಜುಲೈನಲ್ಲಿ ಅವರು ಇದೇ ರೀತಿ ಆಗಿ ಹೇಳಿದ್ದರು. ಕೆಲವೊಮ್ಮೆ ರಾಜಕೀಯ ನಿವೃತ್ತಿಯನ್ನು ತೆಗೆದುಕೊಳ್ಳಬೇಕು ಎನಿಸುತ್ತದೆ ಎಂದು ಹೇಳಿದ್ದರು. ಇದು ಕೂಡ ಭಾರೀ ಸುದ್ದಿಯಾಗಿತ್ತು.
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್…
ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…
ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗಿದ್ದು, ನ್ಯೂ ಇಯರ್ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್…
ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್…