ನಾಗ್ಪುರ, ಮಹಾರಾಷ್ಟ್ರ: ಬಿಜೆಪಿಯ ಪ್ರಮುಖ ನಾಯಕರೂ ಆಗಿರುವ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಸುಳಿವು ನೀಡಿದ್ದಾರೆ.
ಇದರೊಂದಿಗೆ ಬಿಜೆಪಿ ಹೈಕಮಾಂಡ್ ಜತೆಗಿನ ಅವರ ಮುನಿಸು ಬಹಿರಂಗಗೊಂಡಿದೆ. ಕೆಲವು ಮೂಲಗಳ ಪ್ರಕಾರ 2024ರ ಚುನಾವಣೆಯಲ್ಲಿ ಗಡ್ಕರಿ ಅವರಿಗೆ ಬಿಜೆಪಿಯು ಟಿಕೆಟ್ ನಿರಾಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ ಅವರು, ತಾವು ಎರಡು ಚುನಾವಣೆಗಳನ್ನು ಗೆದ್ದಿದ್ದರೂ, ಜನರಿಗೆ ತಾನು ಯೋಗ್ಯ ಎನಿಸಿದರೆ ಮಾತ್ರವೇ ವೋಟ್ ಮಾಡಲಿ ಎಂದಿದ್ದಾರೆ. ಒಂದು ಮಿತಿಯನ್ನು ದಾಟಿ ನಾನು ಯಾರನ್ನೂ ಓಲೈಸಲು ಹೋಗುವುದಿಲ್ಲ. ಒಂದು ವೇಳೆ, ನನ್ನ ಜಾಗದಲ್ಲಿ ಮತ್ತೊಬ್ಬರು ಯಾರೇ ಬಂದರೂ ಪರ್ವಾಗಿಲ್ಲ. ಆಗಲೂ ನಾನು ನನ್ನ ಕೆಲಸಕ್ಕೆ ಹೆಚ್ಚು ಸಮಯವನ್ನು ಕೊಡುತ್ತೇನೆ ಎಂದು ಗಡ್ಕರಿ ಅವರು ಹೇಳಿದ್ದರು.
ಇದೇ ವೇಳೆ, ನಿತಿನ್ ಗಡ್ಕರಿ ಅವರ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಯಿಸಿವೆ. ಗಡ್ಕರಿ ಅವರು ಮತಗಳನ್ನು ಪಡೆಯಲು ಓಲೈಕೆ ರಾಜಕಾರಣವನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆಂದು ಗಡ್ಕರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆಯೂ ಸಾರ್ವಜನಿಕ ವೇದಿಕೆಯಲ್ಲಿ ಇದೇ ರೀತಿಯಲ್ಲಿ ಗಡ್ಕರಿ ಅವರು ನಿವೃತ್ತಿಯ ಸುಳಿವು ಬಿಟ್ಟುಕೊಟ್ಟಿದ್ದರು. ಜನವರಿ ತಿಂಗಳಲ್ಲಿ ಆಯೋಜಿಸಲಾಗಿದ್ದ ಹಬ್ಬಾ ಆದಿವಾಸಿ ಮಹಾಸಂಘ ಸದಸ್ಯರ ಸಭೆಯಲ್ಲಿ ಅವರು, ನೀವು ಯಾರಿಗೆ ಬೇಕಾದರೂ ವೋಟ್ ಮಾಡಬಹುದು ಅದು ನಿಮಗೆ ಬಿಟ್ಟ ವಿಷಯ ಎಂದು ಹೇಳಿದ್ದರು. ಆ ಮೂಲಕ ನಾನಾ ಊಹೆಗಳಿಗೆ ಅವಕಾಶ ಕಲ್ಪಿಸಿದ್ದರು.
ಕಳೆದ ವರ್ಷ ಜುಲೈನಲ್ಲಿ ಅವರು ಇದೇ ರೀತಿ ಆಗಿ ಹೇಳಿದ್ದರು. ಕೆಲವೊಮ್ಮೆ ರಾಜಕೀಯ ನಿವೃತ್ತಿಯನ್ನು ತೆಗೆದುಕೊಳ್ಳಬೇಕು ಎನಿಸುತ್ತದೆ ಎಂದು ಹೇಳಿದ್ದರು. ಇದು ಕೂಡ ಭಾರೀ ಸುದ್ದಿಯಾಗಿತ್ತು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…