BREAKING NEWS

ಬಿಜೆಪಿ ಹೈಕಮಾಂಡ್‌ ಜೊತೆ ಮುನಿಸು: ಗಡ್ಕರಿ ರಾಜಕೀಯ ನಿವೃತ್ತಿ.?

ನಾಗ್ಪುರ, ಮಹಾರಾಷ್ಟ್ರ: ಬಿಜೆಪಿಯ ಪ್ರಮುಖ ನಾಯಕರೂ ಆಗಿರುವ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಸುಳಿವು ನೀಡಿದ್ದಾರೆ.

ಇದರೊಂದಿಗೆ ಬಿಜೆಪಿ ಹೈಕಮಾಂಡ್ ಜತೆಗಿನ ಅವರ ಮುನಿಸು ಬಹಿರಂಗಗೊಂಡಿದೆ. ಕೆಲವು ಮೂಲಗಳ ಪ್ರಕಾರ 2024ರ ಚುನಾವಣೆಯಲ್ಲಿ ಗಡ್ಕರಿ ಅವರಿಗೆ ಬಿಜೆಪಿಯು ಟಿಕೆಟ್ ನಿರಾಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ ಅವರು, ತಾವು ಎರಡು ಚುನಾವಣೆಗಳನ್ನು ಗೆದ್ದಿದ್ದರೂ, ಜನರಿಗೆ ತಾನು ಯೋಗ್ಯ ಎನಿಸಿದರೆ ಮಾತ್ರವೇ ವೋಟ್ ಮಾಡಲಿ ಎಂದಿದ್ದಾರೆ. ಒಂದು ಮಿತಿಯನ್ನು ದಾಟಿ ನಾನು ಯಾರನ್ನೂ ಓಲೈಸಲು ಹೋಗುವುದಿಲ್ಲ. ಒಂದು ವೇಳೆ, ನನ್ನ ಜಾಗದಲ್ಲಿ ಮತ್ತೊಬ್ಬರು ಯಾರೇ ಬಂದರೂ ಪರ್ವಾಗಿಲ್ಲ. ಆಗಲೂ ನಾನು ನನ್ನ ಕೆಲಸಕ್ಕೆ ಹೆಚ್ಚು ಸಮಯವನ್ನು ಕೊಡುತ್ತೇನೆ ಎಂದು ಗಡ್ಕರಿ ಅವರು ಹೇಳಿದ್ದರು.

ಇದೇ ವೇಳೆ, ನಿತಿನ್ ಗಡ್ಕರಿ ಅವರ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಯಿಸಿವೆ. ಗಡ್ಕರಿ ಅವರು ಮತಗಳನ್ನು ಪಡೆಯಲು ಓಲೈಕೆ ರಾಜಕಾರಣವನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆಂದು ಗಡ್ಕರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆಯೂ ಸಾರ್ವಜನಿಕ ವೇದಿಕೆಯಲ್ಲಿ ಇದೇ ರೀತಿಯಲ್ಲಿ ಗಡ್ಕರಿ ಅವರು ನಿವೃತ್ತಿಯ ಸುಳಿವು ಬಿಟ್ಟುಕೊಟ್ಟಿದ್ದರು. ಜನವರಿ ತಿಂಗಳಲ್ಲಿ ಆಯೋಜಿಸಲಾಗಿದ್ದ ಹಬ್ಬಾ ಆದಿವಾಸಿ ಮಹಾಸಂಘ ಸದಸ್ಯರ ಸಭೆಯಲ್ಲಿ ಅವರು, ನೀವು ಯಾರಿಗೆ ಬೇಕಾದರೂ ವೋಟ್ ಮಾಡಬಹುದು ಅದು ನಿಮಗೆ ಬಿಟ್ಟ ವಿಷಯ ಎಂದು ಹೇಳಿದ್ದರು. ಆ ಮೂಲಕ ನಾನಾ ಊಹೆಗಳಿಗೆ ಅವಕಾಶ ಕಲ್ಪಿಸಿದ್ದರು.

ಕಳೆದ ವರ್ಷ ಜುಲೈನಲ್ಲಿ ಅವರು ಇದೇ ರೀತಿ ಆಗಿ ಹೇಳಿದ್ದರು. ಕೆಲವೊಮ್ಮೆ ರಾಜಕೀಯ ನಿವೃತ್ತಿಯನ್ನು ತೆಗೆದುಕೊಳ್ಳಬೇಕು ಎನಿಸುತ್ತದೆ ಎಂದು ಹೇಳಿದ್ದರು. ಇದು ಕೂಡ ಭಾರೀ ಸುದ್ದಿಯಾಗಿತ್ತು.

andolanait

Recent Posts

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

33 mins ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

1 hour ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

3 hours ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

3 hours ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

4 hours ago

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

5 hours ago