Mysore
23
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಹತ್ಯೆ : ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ

ಬೆಂಗಳೂರು : ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನ ತಮಿಳುನಾಡಿನ ಕೃಷ್ಣಗಿರಿ ಬಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್​ ಆಗಿದ್ದ ಬಾಬುನನ್ನ ನಿನ್ನೆ(ಮೇ.20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಕೊಲೆ, ಸುಲಿಗೆ, ಬೆದರಿಕೆ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಅಲ್ಯೂಮಿನಿಯಂ ಬಾಬು ಭಾಗಿಯಾಗಿದ್ದ. ಇತ್ತೀಚೆಗೆ ಬೆಂಗಳೂರಿನಿಂದ ತಮಿಳುನಾಡಿಗೆ ರೌಡಿಶೀಟರ್​ ಬಾಬು ವಾಸ್ತವ್ಯ ಬದಲಿಸಿದ್ದ. ಇದೀಗ ಕೃಷ್ಣಗಿರಿ ತಾಲೂಕಿನ ಡೆಂಕಣಕೋಟೆ ಅರಣ್ಯ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದೆ.

ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ : ಹೌದು ಕೊಲೆಯಾದ ಬಾಬು ಬೆಂಗಳೂರಿನ ಕೊತ್ತನೂರು ದಿಣ್ಣೆ ಬಳಿ ಹಾಲೋಬ್ರಿಕ್ಸ್ ವ್ಯವಹಾರ ನಡೆಸುತಿದ್ದ. ಜೊತೆಗೆ ಕೆಲ ರಾಜಕಾರಣಿಗಳನ್ನು ಎದುರು ಹಾಕಿಕೊಂಡಿದ್ದ. ಮೃತ ರೌಡಿ ಶೀಟರ್ ಅರಸಯ್ಯನ ಗ್ಯಾಂಗ್​ನಲ್ಲಿ ಬಾಬು ಗುರುತಿಸಿಕೊಂಡಿದ್ದ. ಇನ್ನು ಇತನನ್ನ ಬೆಂಗಳೂರಿನಿಂದ ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಡೆಂಕಣಕೋಟೆ ಕಾಡಿನಲ್ಲಿ, ಪ್ಲಾಸ್ಟಿಕ್ ಚೀಲದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಘಟನೆ ಸಂಬಂಧ ತಮಿಳುನಾಡಿನ ತಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!