ಬೆಂಗಳೂರು : ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನ ತಮಿಳುನಾಡಿನ ಕೃಷ್ಣಗಿರಿ ಬಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಬಾಬುನನ್ನ ನಿನ್ನೆ(ಮೇ.20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಕೊಲೆ, ಸುಲಿಗೆ, ಬೆದರಿಕೆ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಅಲ್ಯೂಮಿನಿಯಂ ಬಾಬು ಭಾಗಿಯಾಗಿದ್ದ. ಇತ್ತೀಚೆಗೆ ಬೆಂಗಳೂರಿನಿಂದ ತಮಿಳುನಾಡಿಗೆ ರೌಡಿಶೀಟರ್ ಬಾಬು ವಾಸ್ತವ್ಯ ಬದಲಿಸಿದ್ದ. ಇದೀಗ ಕೃಷ್ಣಗಿರಿ ತಾಲೂಕಿನ ಡೆಂಕಣಕೋಟೆ ಅರಣ್ಯ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದೆ.
ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ : ಹೌದು ಕೊಲೆಯಾದ ಬಾಬು ಬೆಂಗಳೂರಿನ ಕೊತ್ತನೂರು ದಿಣ್ಣೆ ಬಳಿ ಹಾಲೋಬ್ರಿಕ್ಸ್ ವ್ಯವಹಾರ ನಡೆಸುತಿದ್ದ. ಜೊತೆಗೆ ಕೆಲ ರಾಜಕಾರಣಿಗಳನ್ನು ಎದುರು ಹಾಕಿಕೊಂಡಿದ್ದ. ಮೃತ ರೌಡಿ ಶೀಟರ್ ಅರಸಯ್ಯನ ಗ್ಯಾಂಗ್ನಲ್ಲಿ ಬಾಬು ಗುರುತಿಸಿಕೊಂಡಿದ್ದ. ಇನ್ನು ಇತನನ್ನ ಬೆಂಗಳೂರಿನಿಂದ ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಡೆಂಕಣಕೋಟೆ ಕಾಡಿನಲ್ಲಿ, ಪ್ಲಾಸ್ಟಿಕ್ ಚೀಲದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಘಟನೆ ಸಂಬಂಧ ತಮಿಳುನಾಡಿನ ತಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆತಂಕ ಒಂದು ವರ್ಷದಲ್ಲಿ ೨೫ ಚಿರತೆಗಳ ಸೆರೆ ಅರಣ್ಯ ಇಲಾಖೆಯಿಂದ ಜನ…
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…