ಬೆಂಗಳೂರು : ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನ ತಮಿಳುನಾಡಿನ ಕೃಷ್ಣಗಿರಿ ಬಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಬಾಬುನನ್ನ ನಿನ್ನೆ(ಮೇ.20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಕೊಲೆ, ಸುಲಿಗೆ, ಬೆದರಿಕೆ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಅಲ್ಯೂಮಿನಿಯಂ ಬಾಬು ಭಾಗಿಯಾಗಿದ್ದ. ಇತ್ತೀಚೆಗೆ ಬೆಂಗಳೂರಿನಿಂದ ತಮಿಳುನಾಡಿಗೆ ರೌಡಿಶೀಟರ್ ಬಾಬು ವಾಸ್ತವ್ಯ ಬದಲಿಸಿದ್ದ. ಇದೀಗ ಕೃಷ್ಣಗಿರಿ ತಾಲೂಕಿನ ಡೆಂಕಣಕೋಟೆ ಅರಣ್ಯ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದೆ.
ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ : ಹೌದು ಕೊಲೆಯಾದ ಬಾಬು ಬೆಂಗಳೂರಿನ ಕೊತ್ತನೂರು ದಿಣ್ಣೆ ಬಳಿ ಹಾಲೋಬ್ರಿಕ್ಸ್ ವ್ಯವಹಾರ ನಡೆಸುತಿದ್ದ. ಜೊತೆಗೆ ಕೆಲ ರಾಜಕಾರಣಿಗಳನ್ನು ಎದುರು ಹಾಕಿಕೊಂಡಿದ್ದ. ಮೃತ ರೌಡಿ ಶೀಟರ್ ಅರಸಯ್ಯನ ಗ್ಯಾಂಗ್ನಲ್ಲಿ ಬಾಬು ಗುರುತಿಸಿಕೊಂಡಿದ್ದ. ಇನ್ನು ಇತನನ್ನ ಬೆಂಗಳೂರಿನಿಂದ ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಡೆಂಕಣಕೋಟೆ ಕಾಡಿನಲ್ಲಿ, ಪ್ಲಾಸ್ಟಿಕ್ ಚೀಲದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಘಟನೆ ಸಂಬಂಧ ತಮಿಳುನಾಡಿನ ತಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…