ನವದೆಹಲಿ : ಟ್ವಿಟ್ಟರ್ ಬಳಕೆದಾರರಿಗೆ ಉದ್ಯಮಿ ಹಾಗೂ ಟ್ವಿಟ್ಟರ್ ಸಂಸ್ಥೆ ಮುಖ್ಯಸ್ಥ ಎಲಾನ್ ಮಸ್ಕ್ ಮತ್ತೊಂದು ಶಾಕ್ ನೀಡಿದ್ದಾರೆ. ಚೀನಾದ ‘ವಿ ಚಾಟ್’ ರೀತಿ ‘ಸೂಪರ್ ಆಪ್’ ಸೃಷ್ಟಿಸುವ ಬಗ್ಗೆ ಅನೇಕ ಬಾರಿ ಪ್ರಸ್ತಾಪಿಸಿದ್ದ ಅವರು, ಟ್ವಿಟ್ಟರ್ ತಾಣವನ್ನು ರೀಬ್ರ್ಯಾಂಡ್ ಮಾಡುವ ಯೋಜನೆ ಇದೆ ಎಂಬ ಬಾಂಬ್ ಸಿಡಿಸಿದ್ದಾರೆ.
“ಶೀಘ್ರದಲ್ಲಿಯೇ ಟ್ವಿಟ್ಟರ್ ಬ್ರ್ಯಾಂಡ್ಗೆ ಮತ್ತು ಎಲ್ಲಾ ಹಕ್ಕಿಗಳಿಗೆ ಕ್ರಮೇಣವಾಗಿ ನಾವು ವಿದಾಯ ಹೇಳಬೇಕಿದೆ” ಎಂದು ಮಸ್ಕ್ ಟ್ವೀಟ್ ಮಾಡಿದ್ದಾರೆ.
ಅಲ್ಲದೆ, ತಮ್ಮ ಕನಸಿನ ‘ಎಕ್ಸ್’ ಆಪ್ ಬಗ್ಗೆಯೂ ಅವರು ಪ್ರಸ್ತಾಪ ಮಾಡಿದ್ದಾರೆ. ಈ ಆಪ್ ಜನರು ತಮ್ಮ ಅನಿಸಿಕೆಗಳನ್ನು ಜಗತ್ತಿನ ಜತೆ ಹಂಚಿಕೊಳ್ಳಲು ಇರುವ ವೇದಿಕೆಗಳಿಗಿಂತಲೂ ವಿಭಿನ್ನ ಹಾಗೂ ದೊಡ್ಡದು ಎಂದು ಅವರು ಹೇಳಿಕೊಂಡಿದ್ದರು.
“ಇಂದು ರಾತ್ರಿ ಸಾಕಷ್ಟು ಉತ್ತಮ ಎನ್ನಬಹುದಾದ X ಲೋಗೋ ದೊರೆತರೆ, ನಾಳೆಯೇ ನಾವು ಜಗತ್ತಿನಾದ್ಯಂತ ಲೈವ್ ಹೋಗಲಿದ್ದೇವೆ” ಎಂದು ಎಕ್ಸ್ ಆಪ್ ಶೀಘ್ರವೇ ಕಾರ್ಯಾಚರಣೆ ನಡೆಸಲಿದೆ ಎಂಬುದಾಗಿ ಮತ್ತೊಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ನೀಲಿ ಹಕ್ಕಿಯನ್ನು ಚಿತ್ರಿಸುವ ತನ್ನ ಲೋಗೋ, “ನಮ್ಮ ಬಹಳ ಅಮೂಲ್ಯವಾದ ಆಸ್ತಿ. ಹೀಗಾಗಿ ನಾವು ಅದರ ಬಗ್ಗೆ ಅಪಾರ ಕಾಳಜಿ ಹೊಂದಿದ್ದೇವೆ” ಎಂಬುದಾಗಿ ಟ್ವಿಟರ್ ವೆಬ್ಸೈಟ್ನಲ್ಲಿ ಹೇಳಿದೆ.
ಏಪ್ರಿಲ್ನಲ್ಲಿ ಡೊಗೆಕಾಯಿನ್ ಶಿಬಾ ಇನು ನಾಯಿಯ ಚಿತ್ರದೊಂದಿಗೆ ಟ್ವಿಟರ್ನ ಹಕ್ಕಿ ಚಿತ್ರವನ್ನು ತಾತ್ಕಾಲಿಕವಾಗಿ ಬದಲಿಸಲಾಗಿತ್ತು. ಇದರಿಂದ ಮೀಮ್ ಕಾಯಿನ್ ಮಾರ್ಕೆಟ್ ಮೌಲ್ಯಕ್ಕೆ 4 ಬಿಲಿಯನ್ ಡಾಲರ್ನಷ್ಟು ಹಣ ದೊಕಲು ನೆರವಾಗಿತ್ತು.
ತಮ್ಮ ಸೂಪರ್ ಆಪ್ಗೆ ‘ಎಕ್ಸ್’ ಎಂಬ ಹೆಸರು ಇಡುವ ಬಗ್ಗೆ ಎಲಾನ್ ಮಸ್ಕ್ ಕೆಲವು ಸಮಯದಿಂದ ಹಲವು ಬಾರಿ ಪ್ರಸ್ತಾಪಿಸಿದ್ದರು. ಏಪ್ರಿಲ್ನಲ್ಲಿ ನೂತನ ಸಿಇಒ ಲಿಂಡಾ ಯಾಕ್ಕರಿನೊ ಅವರನ್ನು ಸ್ವಾಗತಿಸಿ ಟ್ವೀಟ್ ಮಾಡಿದ್ದ ಮಸ್ಕ್, “ಈ ವೇದಿಕೆಯನ್ನು ಪ್ರತಿಯೊಂದರ ಆಪ್ ಎಕ್ಸ್ ಆಗಿ ಪರಿವರ್ತಿಸಲು ಲಿಂಡಾ ಜತೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದರು.
“ಟ್ವಿಟ್ಟರ್ ಖರೀದಿಯು ಎಕ್ಸ್ ಸೃಷ್ಟಿಯ ವೇಗವರ್ಧಕವಾಗಿದೆ” ಎಂದು ಕಳೆದ ಅಕ್ಟೋಬರ್ನಲ್ಲಿ ಮಸ್ಕ್ ಟ್ವೀಟ್ ಮಾಡಿದ್ದರು.
ಟೆಸ್ಲಾ ಉದ್ಯಮಿ ಮಸ್ಕ್ ಅವರು ಸಾಮಾಜಿಕ ಜಾಲತಾಣವನ್ನು ಕಳೆದ ವರ್ಷ ಖರೀದಿಸಿದ ಬೆನ್ನಲ್ಲೇ ನೂರಾರು ಸಿಬ್ಬಂದಿಯನ್ನು ಕೆಲಸದಿಂದ ಕಿತ್ತು ಹಾಕಿದ್ದರು. ಆಗಿನಿಂದಲೂ ಟ್ವಿಟ್ಟರ್ ನಿರಂತರವಾಗಿ ತಾಂತ್ರಿಕ ಲೋಪಗಳನ್ನು ಎದುರಿಸುತ್ತಾ ಬಂದಿದೆ. ಅದರ ಜಾಹೀರಾತು ಆದಾಯವು ಸತತವಾಗಿ ಇಳಿಕೆಯಾಗುತ್ತಿದೆ. ವೇದಿಕೆಯನ್ನು ಉಳಿಸಲು ಟ್ವಿಟ್ಟರ್ ಕೆಲವು ಕೊನೆಯ ಹಂತದ ಪ್ರಯತ್ನಗಳನ್ನು ನಡೆಸುತ್ತಿದೆ.
ಒಂದೆಡೆ ಹಣ ಕಳೆದುಕೊಳ್ಳುತ್ತಿದ್ದರೂ, ಜಾಹೀರಾತಿಗೆ ಪರ್ಯಾಯವಾಗಿ ಬೇರೆ ಆದಾಯದ ಮೂಲಕ್ಕಾಗಿ ವಿಭಿನ್ನ ಉದ್ಯಮ ಮಾದರಿಯೊಂದಿಗೆ ಬರಲು ಪ್ರಯತ್ನಿಸುತ್ತಿದೆ. ಕಂಪೆನಿಯ ಟ್ವಿಟ್ಟರ್ ಬ್ಲೂ ಪ್ರೀಮಿಯಂ ಚಂದಾದಾರಿಕೆಗೆ ತಿಂಗಳಿಗೆ 8 ಡಾಲರ್ ನೀಡಬೇಕಿದೆ. ಇದರಿಂದ ಕಂಪೆನಿಗೆ ಕೊಂಚ ಲಾಭ ಬರುತ್ತಿದೆ. ಕೆಲವು ಟ್ವಿಟ್ಟರ್ ಬ್ಲೂ ಚಂದಾದಾರರಿಗೆ, ಅವರ ಟ್ವೀಟ್ಗಳಿಗೆ ಬರುವ ಸ್ಪಂದನೆಯ ಆಧಾರದಲ್ಲಿ ಜಾಹೀರಾತು ಆದಾಯವನ್ನು ಹಂಚಿಕೆ ಮಾಡುವುದನ್ನು ಕಂಪೆನಿ ಈ ತಿಂಗಳು ಆರಂಭಿಸಿದೆ. ಈ ರೀತಿ ಹಣ ಪಡೆದ ಖಾತೆಗಳು ಹೆಚ್ಚಾಗಿ ಸ್ವತಃ ಮಸ್ಕ್ ಜತೆಗೆ ಸಂವಾದ ನಡೆಸುವವರದ್ದೇ ಆಗಿವೆ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…