BREAKING NEWS

ಹಿಂದೂ ಸಮಾಜದ ಅನಿಷ್ಟಗಳಿಗೆ ಮುಸ್ಲಿಮರ ಆಕ್ರಮಣವೇ ಕಾರಣ : ಆರ್‌ಎಸ್ಎಸ್‌ ಮುಖಂಡ

ನವದೆಹಲಿ : ಹಿಂದೂ ಸಮಾಜದ ಅನಿಷ್ಟಗಳಿಗೆ ಮುಸ್ಲಿಮರ ಆಕ್ರಮಣವೇ ಕಾರಣ ಎಂದು ಆರ್‌ಎಸ್‍ಎಸ್ ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಗೋಪಾಲ್ ವ್ಯಾಖ್ಯಾನಿಸಿದ್ದಾರೆ.

ನಾರಿ ಶಕ್ತಿ ಸಂಗಮ್‌ನ ಆಶ್ರಯದಲ್ಲಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಅವರು, 12 ನೇ ಶತಮಾನದ ಮೊದಲು, ಮಹಿಳೆಯರು ಸ್ವತಂತ್ರರಾಗಿದ್ದರು ಮತ್ತು ಭಾರತೀಯ ಸಮಾಜಕ್ಕೆ ಗಣನೀಯ ಕೊಡುಗೆ ನೀಡಿದ್ದರು. ಬಾಲ್ಯ ವಿವಾಹ, ಸತಿಪದ್ದತಿ, ವಿಧವಾ ವಿವಾಹ ನಿಷೇಧದಂತಹ ಸಾಮಾಜಿಕ ಅನಿಷ್ಟಗಳು ಭಾರತಕ್ಕೆ ಬರಲು ಇಸ್ಲಾಮಿಕ್ ಆಕ್ರಮಣವೇ ಕಾರಣ. ಮಧ್ಯಕಾಲೀನ ಅವಧಿಯಲ್ಲಿ ಮುಸ್ಲಿಂ ಆಕ್ರಮಣಕಾರರಿಂದ ಮಹಿಳೆಯರನ್ನು ರಕ್ಷಿಸಿಕೊಳ್ಳಲು ಅವರ ಮೇಲೆ ನಾನಾ ನಿರ್ಬಂಧ ಹೇರಲಾಗುತ್ತಿತ್ತು ಎಂದರು.

ಮಧ್ಯಯುಗದಲ್ಲಿ ದೇವಸ್ಥಾನಗಳನ್ನು ಧ್ವಂಸ ಮಾಡಲಾಯಿತು. ವಿಶ್ವವಿದ್ಯಾನಿಲಯಗಳನ್ನು ನಾಶಪಡಿಸಲಾಯಿತು ಮತ್ತು ಮಹಿಳೆಯರು ಅಪಾಯದಲ್ಲಿದ್ದರು. ಲಕ್ಷಗಟ್ಟಲೆ ಮಹಿಳೆಯರನ್ನು ಅಪಹರಿಸಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಲಾಯಿತು. ಅಹ್ಮದ್ ಷಾ ಅಬ್ದಾಲಿ, ಮಹಮ್ಮದ್ ಘೋರಿ, ಮಹಮ್ಮದ್ ಘಜ್ನಿ ಸೇರಿದಂತೆ ಎಲ್ಲರೂ ಇಲ್ಲಿಂದ ಮಹಿಳೆಯರನ್ನು ಕದ್ದು ಮಾರಾಟ ಮಾಡಿದ್ದರು. ಅದೊಂದು ಮಹಾ ಅವಮಾನದ ಯುಗ. ಆದ್ದರಿಂದ ನಮ್ಮ ಮಹಿಳೆಯರನ್ನು ರಕ್ಷಿಸಲು ನಮ್ಮದೇ ಸಮಾಜವು ಅವರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿತ್ತು ಎಂದು ಗೋಪಾಲ್ ಹೇಳಿದರು.

ರಾಮ ಮತ್ತು ಕೃಷ್ಣ ಒಂದು ನಿರ್ದಿಷ್ಟ ವಯಸ್ಸನ್ನು ತಲುಪಿದ ನಂತರ ವಿವಾಹವಾಗಿದ್ದರು. ಆದರೆ ಇಸ್ಲಾಮಿಕ್ ಆಕ್ರಮಣಕಾರರಿಂದ ಬಾಲ್ಯ ವಿವಾಹ ಪ್ರಾರಂಭವಾಯಿತು. ಇಸ್ಲಾಮಿಕ್ ಆಕ್ರಮಣಗಳ ಮೊದಲು ಭಾರತದಲ್ಲಿ ಸತಿ ಸಂಪ್ರದಾಯವೇ ಇರಲಿಲ್ಲ ಎಂದು ಅವರು ಹೇಳಿದರು.

ಮುಸ್ಲಿಮರ ದಾಳಿಯಿಂದ ಮಹಿಳೆಯರು ಕ್ರಮೇಣ ಅಶಿಕ್ಷಿತರಾದರು ಮತ್ತು ಬಾಲ್ಯ ವಿವಾಹದಂತಹ ಸಂಪ್ರದಾಯಗಳು ಹರಿದಾಡಿದವು. ವಿಧವೆಯ ಮರುವಿವಾಹವನ್ನು ನಿಲ್ಲಿಸಲಾಯಿತು ಮತ್ತು ಮಹಿಳೆಯರ ಮೇಲೆ ಬಹು ನಿರ್ಬಂಧಗಳನ್ನು ಹಾಕಲಾಯಿತು. ಈ ನಿರ್ಬಂಧಗಳು ನಮ್ಮ ಸಮಾಜದ ನಿಯಮಗಳಲ್ಲ. ಆದರೆ ತುರ್ತು ಪರಿಸ್ಥಿತಿ ಯನ್ನು ಎದುರಿಸಲು ಸಮಾಜವೇ ಹೇರಿದ ನಿರ್ಬಂಧ. ಈ ನಿರ್ಬಂಧಗಳ ಹೊರತಾಗಿಯೂ, 12 ಮತ್ತು 18ನೇ ಶತಮಾನದ ನಡುವೆ ಸಮಾಜದಲ್ಲಿ ಮಹಿಳೆಯರು ದೊಡ್ಡ ಪಾತ್ರವನ್ನು ವಹಿಸಿದ್ದರು ಎಂದರು.

lokesh

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

4 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

7 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

8 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

8 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

8 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

9 hours ago