BREAKING NEWS

ಮುಸ್ಲಿಂ ಮೀಸಲಾತಿ| ಬಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಸುಪ್ರೀಂಕೋರ್ಟ್ ಬೆತ್ತಲುಗೊಳಿಸಿದೆ: ಕಾಂಗ್ರೆಸ್‌

ಬೆಂಗಳೂರು: ಅಧ್ಯಯನವಿಲ್ಲದೆ ಚುನಾವಣೆ ಗಿಮಿಕ್‍ಗಾಗಿ ಮುಸ್ಲಿಂ ಮೀಸಲಾತಿಯನ್ನು ಕಿತ್ತು ಮೂಗಿಗೆ ತುಪ್ಪ ಸವರುವ ನಿರ್ಧಾರ ದೋಷಪೂರಿತ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು ಬಿಜೆಪಿ ಸರ್ಕಾರದ ಭ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಅನುಷ್ಠಾನ ಅಸಾಧ್ಯ ಎಂದು ನ್ಯಾಯಾಲಯ ಹೇಳುವ ಮೂಲಕ ಜನರ ಕಿವಿ ಮೇಲೆ ಹೂವು ಇಡುವ ಬಿಜೆಪಿ ಪ್ರಯತ್ನವನ್ನು ಬಯಲುಗೊಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಮೀಸಲಾತಿ ಗಿಮಿಕ್ ಅನುಷ್ಠಾನ ಮಾಡುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜನತೆಗೆ ಈಗ ನಿಮ್ಮ ಉತ್ತರವೇನು? ಸಬೂಬುಗಳೇನು ಎಂದು ಪ್ರಶ್ನಿಸಿದೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್ರವರ ಜಯಂತಿ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ ಹಾಗೂ ಬಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಬೆತ್ತಲುಗೊಳಿಸಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago