BREAKING NEWS

ಮುಸ್ಲಿಂ ಯುವತಿಯರನ್ನು ಲವ್ ಮಾಡಿ ಮತಾಂತರ ಮಾಡಬೇಕಾಗುತ್ತೆ : ಆರೂಢ ಭಾರತೀ ಶ್ರೀ ಪ್ರಚೋದನಕಾರಿ ಹೇಳಿಕೆ

ಬೆಂಗಳೂರು : ಮುಸ್ಲಿಮರಿಗಷ್ಟೆ ಗಂಡಸ್ತನ, ಮೀಸೆ ಇರುವುದಲ್ಲ. ಹಿಂದೂ ಹುಡುಗರಿಗೂ ಇದೆ. ಹಿಂದೂ ಹುಡುಗರು ಕೂಡ ಮುಸ್ಲಿಂ ಹುಡುಗಿಯರನ್ನ ಲವ್ ಮಾಡಿ ಮತಾಂತರ ಮಾಡಬೇಕಾಗುತ್ತದೆ ಎಂದು ಸಿದ್ದರೂಢ ಇಂಟರ್ನ್ಯಾಷನಲ್ ಗುರುಕುಲಮ್​ನ ಆರೂಢ ಭಾರತೀ ಸ್ವಾಮೀಜಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರವು ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸ್ ಪಡೆಯಲು ಮುಂದಾಗುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು ಸಂತರ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ನಂತರ ಹಿಂದೂ, ಜೈನ, ಸಿಖ್, ಬೌದ್ದರ ಜನಸಂಖ್ಯೆ ಇಳಿಕೆಯಾಗುತ್ತಿದೆ. ಮುಸ್ಲಿಂ, ಕ್ರೈಸ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಬಲವಂತದ ಮತಾಂತರದ ಸಂಕೇತ ಎಂದರು.

ಮುಸ್ಲಿಂ, ಕ್ರಿಶ್ಚಿಯನ್ನರ ಸಂಖ್ಯೆ ಹೆಚ್ಚಾಗಿದ್ದೆ ಹಿಂದೂಗಳಿಂದ. ಲವ್ ಜಿಹಾದ್, ಮತಾಂತರ ಮೂಲಕ ಜನಸಂಖ್ಯೆ ಹೆಚ್ಚು ಮಾಡುತ್ತಿದ್ದಾರೆ. ಸ್ವಪ್ರೇರಣೆಯಿಂದ ಮತಾಂತರ ಆದರೆ ತಪ್ಪಿಲ್ಲ. ಆದರೆ ಬಲವಂತವಾಗಿ ಮಾಡುವುದು ಅಪರಾಧ. ಹಿಂದೂಗಳು ಸಂಕುಚಿತ ಅಲ್ಲ ಎಂದು ಸ್ವಾಮೀಜಿ ಹೇಳಿದರು.

ನಾನು ಬೈಬಲ್ ಹಾಗೂ ಕುರಾನ್ ಓದಿದ್ದೇನೆ. ಹಿಂದೂಗಳ ದೇವಸ್ಥಾನ, ಮಂದಿರಗಳನ್ನ ಒಡೆದು ಹಾಕಿ, ಆ ಧರ್ಮದ ಅನುಯಾಯಿಗಳು ನೆಲೆ‌ನಿಲ್ಲದಂತೆ ನಾಶ ಮಾಡಬೇಕು ಎಂದು ಬೈಬಲ್​ನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಇದರಿಂದ ಮುಸ್ಲಿಮರು ಕೂಡ ಹೊರತಾಗಿಲ್ಲ ಎಂದು ಭಾರತೀ ಸ್ವಾಮೀಜಿ ಹೇಳಿದರು.

ಸಭೆಯಲ್ಲಿ ಮಾತನಾಡಿದ ಮೇಲುಕೋಟೆಯ ಮಠದ ಪೀಠಾಧೀಧ್ಯಕ್ಷ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ, ನಮ್ಮ ರಾಷ್ಟ್ರದ ಹಲವಾರು ವಿಚಾರ ವಿನಿಮಯ ‌ಮಾಡಲು, ಮುಖ್ಯವಾಗಿ ಗೋಹತ್ಯೆ ‌ನಿಷೇಧ ಮತ್ತು ಮತಾಂತರ ನಿಷೇಧ ವಿಚಾರವಾಗಿ ಇಂದು ಎಲ್ಲಾ ಸಾಧು ಸಂತರ, ಸನ್ಯಾಸಿಗಳ ಸಮಾವೇಶವನ್ನು ವಿಶ್ವ ಹಿಂದೂ ಪರಿಷತ್ ಆಯೋಜನೆ ಮಾಡಿದೆ.

ಮತಾಂತರ ಹಾಗೂ ಗೋಹತ್ಯೆ ಬಗ್ಗೆ ‌ಸಾಧು ಸಂತರು ಚರ್ಚೆ ಮಾಡಬೇಕು. ಮತಾಂತರ ಹಾಗೂ ಗೋಹತ್ಯೆ ‌ನಿಲ್ಲಬೇಕು. ಇದರಿಂದ ನಮ್ಮ ಸನಾತನ ಧರ್ಮಕ್ಕೆ ಪುಷ್ಟಿ ನೀಡಿದಂತೆ ಆಗುತ್ತದೆ. ಯಾವತ್ತೂ ನಮ್ಮ ಧರ್ಮ ಸಹಿಷ್ಣುತೆಯನ್ನೆ ಪ್ರತಿಪಾದಿಸುತ್ತದೆ. ಭಾರತದಲ್ಲಿ ಎಲ್ಲಾ ಧರ್ಮಿಗಳು ವಾಸ ಮಾಡುತ್ತಾರೆ. ಸೌಹಾರ್ದವಾದಂತ ವಾತವರಣದಲ್ಲಿ ಇರಬೇಕು ಎನ್ನುವುದು ನಮ್ಮ ಎಲ್ಲಾ ಹಿರಿಯರ ಚಿಂತನೆಯಾಗಿದೆ. ಹೀಗಾಗಿ ಮತಾಂತ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ಎಲ್ಲಾ ಯತಿಗಳು ಇಲ್ಲಿ ‌ಸೇರಿ‌ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದರು.

ಇವತ್ತಿನ ಸಭೆಯ ನಿರ್ಣಯವನ್ನು ರಾಜ್ಯ ಸರ್ಕಾರಕ್ಕೆ ನೀಡಿ ಒತ್ತಾಯ ಮಾಡಲಿದ್ದೇವೆ. ಸರ್ಕಾರ ಸ್ಪಂದಿಸುವ ವಿಶ್ವಾಸ ನಮ್ಮಲಿದೆ. ಇದರಲ್ಲಿ ಪಕ್ಷ ಮುಖ್ಯ ಆಗುವುದಿಲ್ಲ. ವಿಚಾರ ಮುಖ್ಯವಾಗಿರುತ್ತದೆ. ಈ ವೇದಿಕೆಯ ನಿರ್ಣಯದ ನಂತರ ರಾಷ್ಟ್ರ ಮಟ್ಟದ ನಾಯಕರ ಗಮನಕ್ಕೂ ತರುತ್ತೇವೆ ಎಂದರು.

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

2 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

4 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago