ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೂ ಮೊದಲು, ಆಲ್ ಇಂಡಿಯಾ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಮತ್ತು ಅಸ್ಸಾಂನ ಸಂಸದ ಬದ್ರುದ್ದೀನ್ ಅಜ್ಮಲ್ ಅವರು, ದೇಶದ ಮುಸ್ಲಿಂ ಸಮುದಾಯವನ್ನು ಜನವರಿ 22 ರಂದು ಮನೆಯಲ್ಲಿಯೇ ಇರುವಂತೆ ಕೇಳಿದ್ದಾರೆ ಮತ್ತು ಆ ದಿನದಂದು ರೈಲಿನಲ್ಲಿ ಪ್ರಯಾಣಿಸದಂತೆ ಮನವಿ ಮಾಡಿದ್ದಾರೆ.
ಅಜ್ಮಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದ್ದು, ನಮ್ಮ ‘ಸಮುದಾಯದ ಜನರನ್ನು ಉಳಿಸಿ’ ಎಂದು ಮನವಿ ಮಾಡುತ್ತಿದ್ದಾರೆ ಎಂದಿದೆ. ‘ಪರಿಸ್ಥಿತಿ ಮತ್ತಷ್ಟು ಕೆಟ್ಟದಾಗಬಹುದು. ಬಾಬರಿ ಮಸೀದಿಯನ್ನು ಕೆಡವಿದಾಗ ಮತ್ತು ಹಿಂಸಾಚಾರ ಭುಗಿಲೆದ್ದಾಗ ಮತ್ತು ಜನರನ್ನು ಥಳಿಸಿದ ಮಾದರಿಯಲ್ಲಿಯೇ ಏನಾದರೂ ಸಂಭವಿಸಬಹುದು’ ಎಂದು ಅವರು ಹೇಳಿದರು.
ಬಾರ್ಪೇಟಾದಲ್ಲಿ ಮದರಸಾದ ಶಂಕುಸ್ಥಾಪನೆ ಸಮಾರಂಭದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಅವರು, ‘ಭಾರತದಾದ್ಯಂತ ಸಾವಿರಾರು ಜನರು ಬಸ್ ಮತ್ತು ರೈಲುಗಳಲ್ಲಿ ಅಯೋಧ್ಯೆಗೆ ಪ್ರಯಾಣಿಸುತ್ತಾರೆ. ಈ ವೇಳೆ ಏನು ಬೇಕಾದರೂ ಆಗಬಹುದು. ಆದ್ದರಿಂದ ನಮ್ಮ ದೇಶದಲ್ಲಿರುವ ಮುಸ್ಲಿಮರು ರೈಲಿನಲ್ಲಿ ಪ್ರಯಾಣಿಸುವುದನ್ನು ತಪ್ಪಿಸಬೇಕು’ ಎಂದಿದ್ದಾರೆ.
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…