ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೂ ಮೊದಲು, ಆಲ್ ಇಂಡಿಯಾ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಮತ್ತು ಅಸ್ಸಾಂನ ಸಂಸದ ಬದ್ರುದ್ದೀನ್ ಅಜ್ಮಲ್ ಅವರು, ದೇಶದ ಮುಸ್ಲಿಂ ಸಮುದಾಯವನ್ನು ಜನವರಿ 22 ರಂದು ಮನೆಯಲ್ಲಿಯೇ ಇರುವಂತೆ ಕೇಳಿದ್ದಾರೆ ಮತ್ತು ಆ ದಿನದಂದು ರೈಲಿನಲ್ಲಿ ಪ್ರಯಾಣಿಸದಂತೆ ಮನವಿ ಮಾಡಿದ್ದಾರೆ.
ಅಜ್ಮಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದ್ದು, ನಮ್ಮ ‘ಸಮುದಾಯದ ಜನರನ್ನು ಉಳಿಸಿ’ ಎಂದು ಮನವಿ ಮಾಡುತ್ತಿದ್ದಾರೆ ಎಂದಿದೆ. ‘ಪರಿಸ್ಥಿತಿ ಮತ್ತಷ್ಟು ಕೆಟ್ಟದಾಗಬಹುದು. ಬಾಬರಿ ಮಸೀದಿಯನ್ನು ಕೆಡವಿದಾಗ ಮತ್ತು ಹಿಂಸಾಚಾರ ಭುಗಿಲೆದ್ದಾಗ ಮತ್ತು ಜನರನ್ನು ಥಳಿಸಿದ ಮಾದರಿಯಲ್ಲಿಯೇ ಏನಾದರೂ ಸಂಭವಿಸಬಹುದು’ ಎಂದು ಅವರು ಹೇಳಿದರು.
ಬಾರ್ಪೇಟಾದಲ್ಲಿ ಮದರಸಾದ ಶಂಕುಸ್ಥಾಪನೆ ಸಮಾರಂಭದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಅವರು, ‘ಭಾರತದಾದ್ಯಂತ ಸಾವಿರಾರು ಜನರು ಬಸ್ ಮತ್ತು ರೈಲುಗಳಲ್ಲಿ ಅಯೋಧ್ಯೆಗೆ ಪ್ರಯಾಣಿಸುತ್ತಾರೆ. ಈ ವೇಳೆ ಏನು ಬೇಕಾದರೂ ಆಗಬಹುದು. ಆದ್ದರಿಂದ ನಮ್ಮ ದೇಶದಲ್ಲಿರುವ ಮುಸ್ಲಿಮರು ರೈಲಿನಲ್ಲಿ ಪ್ರಯಾಣಿಸುವುದನ್ನು ತಪ್ಪಿಸಬೇಕು’ ಎಂದಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…