‘ಪಶ್ಚಿಮ ಬಂಗಾಳದಲ್ಲಿ ಲಷ್ಕರ್ ಉಗ್ರನನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಸೇನಾ ವಾಹನಗಳಿಗೆ ಅಲ್ಲಿನ ಮುಸ್ಲಿಮರು ತಡೆಒಡ್ಡಿದ್ದಾರೆ. ಅವರ ಸಂಖ್ಯೆ ಕಡಿಮೆ ಇದ್ದೇ, ಹೀಗೆ ಮಾಡುತ್ತಿದ್ದಾರೆ. ಇನ್ನು ಸಂಖ್ಯೆ ಹೆಚ್ಚಾದರೆ ಪರಿಸ್ಥಿತಿ ಏನು’ ಎಂದು ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದು ತಿರುಚಲಾದ ಮಾಹಿತಿ.
‘ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶಕ್ಕೆ 2021ರ ಮಾರ್ಚ್ನಲ್ಲಿ ಭೇಟಿ ನೀಡಿದ್ದರು. ಅವರ ಭೇಟಿಯನ್ನು ಖಂಡಿಸಿ, ಅಲ್ಲಿನ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 2021ರ ಮಾರ್ಚ್ 26ರಂದು ಚಿತ್ತಗಾಂಗ್ನಲ್ಲಿ ಭದ್ರತಾ ಪರಿಶೀಲನೆಗೆ ಎಂದು ಅಲ್ಲಿನ ಸೇನಾಧಿಕಾರಿಗಳು ಭೇಟಿ ನೀಡಿದ್ದರು. ಮೋದಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮುಸ್ಲಿಮರು ಆ ಸೇನಾಧಿಕಾರಿಗಳ ವಾಹನಗಳನ್ನು ತಡೆದಿದ್ದರು. ಪ್ರತಿಭಟನೆಯ ವಿಡಿಯೊವನ್ನು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ’ ಎಂದು ದಿ ಲಾಜಿಕಲ್ ಇಂಡಿಯನ್ ಫ್ಯಾಕ್ಟ್ಚೆಕ್ ಪ್ರಕಟಿಸಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…