BREAKING NEWS

ರೇವಣ್ಣ ಕುಟುಂಬವನ್ನು ಶಾಶ್ವತವಾಗಿ ರಾಜಕೀಯದಿಂದ ತೆಗೆಯುವುದೇ ನನ್ನ ಗುರಿ : ದೇವರಾಜೇಗೌಡ

ಹಾಸನ : ಪ್ರಜ್ವಲ್‌ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಹೈಕೋರ್ಟ್‌ ಅನರ್ಹಗೊಳಿಸಿರುವುದು ಸತ್ಯಕ್ಕೆ ಸಂದ ಜಯ. ಹೆಚ್‌.ಡಿ. ರೇವಣ್ಣ ಅವರ ಕುಟುಂಬವನ್ನು ರಾಜಕೀಯದಿಂದ ಶಾಶ್ವತವಾಗಿ ತೆಗೆಯಬೇಕು ಎಂಬುದೇ ನನ್ನ ಗುರಿ ಎಂದು ದೂರುದಾರ ಮತ್ತು ವಕೀಲ ದೇವರಾಜೇಗೌಡ ಹೇಳಿದ್ದಾರೆ.

ಇದು ಸಾಮಾನ್ಯ ಹಾಗೂ ಪ್ರಾಮಾಣಿಕ ವಕೀಲನಿಗೆ ಸಿಕ್ಕಿ ಜಯ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಇದುವರೆಗೂ ಬಂದ ಆಮಿಷಗಳಿಗೆ ಒಳಗಾಗಲಿಲ್ಲ. ಬೆದರಿಕೆಗೂ ಹೆದರಲಿಲ್ಲ. ಇದೆಲ್ಲದರ ನಡುವೆ ಪ್ರಜ್ವಲ್‌ ರೇವಣ್ಣ ಅವರ ಅಪರಾಧಗಳ ಬಗ್ಗೆ ಸೂಕ್ತ ದಾಖಲಾತಿಗಳೊಂದಿಗೆ ನ್ಯಾಯಾಲಯದ ಮೊರೆ ಹೋಗಿದ್ದೆ. ನ್ಯಾಯಾಲಯದ ಮೇಲೆ ಅಪಾರ ವಿಶ್ವಾಸ ಇತ್ತು. ಯಾರೇ ತಪ್ಪು ಮಾಡಿದ್ದರೂ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ ಎಂದು ನಾನು ಅರ್ಜಿ ಸಲ್ಲಿಸಿದ್ದೆ. ಅಪರಾಧ ಸಾಬೀತಾದ ಹಿನ್ನೆಲೆ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣರನ್ನು ಅನರ್ಹಗೊಳಿಸಿ ಕೋರ್ಟ್‌ ತೀರ್ಪು ನೀಡಿದೆ ಎಂದು ತಿಳಿಸಿದರು.

23 ಕೋಟಿ ಆಸ್ತಿ ವಿಚಾರ ಮುಚ್ಚಿಟ್ಟಿದ್ದರು. ಬ್ಯಾಂಕ್‌ ಬ್ಯಾಲೆನ್ಸ್‌ ವಿವರವನ್ನೂ ತಪ್ಪು ಕೊಟ್ಟಿದ್ದರು. ಆದಾಯ ತೆರಿಗೆ ಸರಿಯಾಗಿ ಕಟ್ಟದೇ ಸರ್ಕಾರಕ್ಕೆ ವಂಚನೆ ಮಾಡಿದ್ದರು. ಇದೆಲ್ಲವನ್ನು ನಾವು ಸಾಬೀತುಪಡಿಸಿದ್ದೇವೆ. ಅಷ್ಟೇ ಅಲ್ಲದೇ ಚುನಾವಣಾ ಸಂದರ್ಭದಲ್ಲಿ ಪ್ರಜ್ವಲ್‌ ರೇವಣ್ಣ ಪರವಾಗಿ ಅವರ ತಂದೆ 200 ಕ್ಕೂ ಹೆಚ್ಚು ಕಳ್ಳ ವೋಟುಗಳನ್ನು ಹಾಕಿಸಿದ್ದರು. ಅವರು ಜನರಿಗೆ ಹಣ ಹಂಚುವ ದೃಶ್ಯವೂ ಸೆರೆಯಾಗಿತ್ತು. ಇದರ ವಿರುದ್ಧ ಎಫ್‌ಐಆರ್‌ ಕೂಡ ದಾಖಲಾಗಿತ್ತು. ಬಾವಿಕೆರೆ ಗ್ರಾಮದಲ್ಲಿ ಸರ್ಕಾರಿ ಜಾಗವನ್ನು ರಿಜಿಸ್ಟರ್‌ ಮಾಡಿಕೊಂಡಿದ್ದರು. ನಾವು ಮಾಡಿದ ಎಲ್ಲಾ ಆರೋಪಗಳಿಗೂ ಪೂರಕ ದಾಖಲಾತಿಗಳನ್ನು ಒದಗಿಸಿ ಸಾಬೀತುಪಡಿಸಿದ್ದೆವು. ನಮ್ಮ ಹೋರಾಟಕ್ಕೆ ಮತ್ತು ಸತ್ಯಕ್ಕೆ ಜಯ ಸಿಕ್ಕಿದೆ. ಚುನಾವಣೆಯಲ್ಲಿ ನಿಲ್ಲಬೇಕಾದ ವ್ಯಕ್ತಿ ಸ್ವಚ್ಛವಾಗಿ ಇರಬೇಕು ಎಂಬ ಸಂದೇಶವನ್ನು ಕೋರ್ಟ್‌ ತನ್ನ ತೀರ್ಪಿನ ಮೂಲಕ ನೀಡಿದೆ ಎಂದರು.

lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

20 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

21 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

23 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

25 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

30 mins ago