BREAKING NEWS

ಮೈ-ಬೆಂ. ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ಇಬ್ಬರು ಗಂಭೀರ

ಮಂಡ್ಯ : ಡೆಡ್ಲಿ ಆಕ್ಸಿಡೆಂಟ್‍ಗೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಮತ್ತೊಮ್ಮೆ ಸಾಕ್ಷಿಯಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಎರಡು ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇ ನಲ್ಲಿ ನಡೆದಿದೆ.

ಕಾರು ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿತ್ತು. ಭೀಕರ ಅಪಘಾತದಲ್ಲಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ನಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದವರೆಲ್ಲ ಬೆಂಗಳೂರು ಮೂಲದವರು ಎನ್ನಲಾಗಿದೆ.

ಅದೃಷ್ಟವಶಾತ್ ಅಪಘಾತಕ್ಕೀಡಾದ ಕಾರಿನ ಮುಂದೆ-ಹಿಂದೆ ಯಾವುದೇ ವಾಹನ ಸಂಚರಿಸದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ದಶಪಥ ಹೆದ್ದಾರಿಯಿಂದ ಅಪಘಾತದ ಕಾರು ತೆರವು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

lokesh

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

10 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago