BREAKING NEWS

ನನ್ನ ಬದುಕಿನ ಹಸಿವು, ಬಡತನದ ಅನುಭವದಿಂದಲೇ ಅನ್ನಭಾಗ್ಯ ಜಾರಿ : ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯಕ್ಕೆ ಸೋಮವಾರ 10 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಸಂತಸ ಹಂಚಿಕೊಂಡಿರುವ ಸಿದ್ದರಾಮಯ್ಯ, ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡ ಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರ ಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು ಜುಲೈ 10, 2013ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ ಎಂದು ತಿಳಿಸಿದ್ದಾರೆ.

ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ – ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ. ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು ಎಂದು ಹೇಳಿದ್ದಾರೆ.

ಇನ್ನು ಸಿಎಂ ಆಫ್‌ ಕರ್ನಾಟಕದ ಟ್ವೀಟ್‌ ಖಾತೆಯಿಂದಲೂ ಟ್ವೀಟ್‌ ಮಾಡಿದ್ದು, ಹಸಿವಿನ ಬೇನೆ ನಾಡಿನ ಬಡ ಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಸೋಮವಾರದಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ ಜಿ ಅಕ್ಕಿ ಹಾಗೂ 170 ರೂ. ನೀಡಲಿದ್ದೇವೆ.

ಹೆಚ್ಚುವರಿ 5 ಕೆ ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

1.28 ಕೋಟಿ ಪಡಿತರ ಕುಟುಂಬಗಳಿಗೆ ಅಕ್ಕಿ ಬದಲು ಹಣ!

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಸೋಮವಾರ ಚಾಲನೆ ಸಿಗಲಿದೆ. 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಹಸಿವು ಮುಕ್ತ ಕರ್ನಾಟಕ ಎಂಬ ಘೋಷ ವಾಕ್ಯದೊಂದಿಗೆ ಈ ಯೋಜನೆಗೆ ಸಿದ್ದರಾಮಯ್ಯ ಸಂಜೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯ ಪ್ರಕಾರ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಅಥವಾ ಆಹಾರ ಧಾನ್ಯ ಉಚಿತವಾಗಿ ಸಿಗಲಿದೆ.

andolanait

Recent Posts

ನಾಳೆ ಸಂಜೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…

7 mins ago

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

1 hour ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

2 hours ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

2 hours ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

2 hours ago