BREAKING NEWS

ನನ್ನ ಬದುಕಿನ ಹಸಿವು, ಬಡತನದ ಅನುಭವದಿಂದಲೇ ಅನ್ನಭಾಗ್ಯ ಜಾರಿ : ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯಕ್ಕೆ ಸೋಮವಾರ 10 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಸಂತಸ ಹಂಚಿಕೊಂಡಿರುವ ಸಿದ್ದರಾಮಯ್ಯ, ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡ ಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರ ಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು ಜುಲೈ 10, 2013ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ ಎಂದು ತಿಳಿಸಿದ್ದಾರೆ.

ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ – ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ. ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು ಎಂದು ಹೇಳಿದ್ದಾರೆ.

ಇನ್ನು ಸಿಎಂ ಆಫ್‌ ಕರ್ನಾಟಕದ ಟ್ವೀಟ್‌ ಖಾತೆಯಿಂದಲೂ ಟ್ವೀಟ್‌ ಮಾಡಿದ್ದು, ಹಸಿವಿನ ಬೇನೆ ನಾಡಿನ ಬಡ ಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಸೋಮವಾರದಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ ಜಿ ಅಕ್ಕಿ ಹಾಗೂ 170 ರೂ. ನೀಡಲಿದ್ದೇವೆ.

ಹೆಚ್ಚುವರಿ 5 ಕೆ ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

1.28 ಕೋಟಿ ಪಡಿತರ ಕುಟುಂಬಗಳಿಗೆ ಅಕ್ಕಿ ಬದಲು ಹಣ!

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಸೋಮವಾರ ಚಾಲನೆ ಸಿಗಲಿದೆ. 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಹಸಿವು ಮುಕ್ತ ಕರ್ನಾಟಕ ಎಂಬ ಘೋಷ ವಾಕ್ಯದೊಂದಿಗೆ ಈ ಯೋಜನೆಗೆ ಸಿದ್ದರಾಮಯ್ಯ ಸಂಜೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯ ಪ್ರಕಾರ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಅಥವಾ ಆಹಾರ ಧಾನ್ಯ ಉಚಿತವಾಗಿ ಸಿಗಲಿದೆ.

andolanait

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

10 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

10 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

10 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

10 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

10 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

13 hours ago