ಬ್ಯಾಂಕಾಕ್: ಮ್ಯಾನ್ಮಾರ್ನಲ್ಲಿ ಮಿಲಿಟರಿ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 100 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಈ ಭೀಕರ ದಾಳಿಯನ್ನು ವಿಶ್ವಸಂಸ್ಥೆ, ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಬಲವಾಗಿ ಖಂಡಿಸಿವೆ.
ಮ್ಯಾನ್ಮಾರ್ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ.
ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…