ಮೈಸೂರು: ರಸ್ತೆ ದಾಟುತಿದ್ದ ಹುಲಿಗೆ ಕಾರೊಂದು ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹುಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ನಂಜನಗೂಡು ಹೆದ್ದಾರಿಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಮೈಸೂರು ನಗರದಲ್ಲಿ ತನ್ನ ಮೂರು ಮರಿಗಳೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಸುಮಾರು ಒಂದೂವರೆ ವರ್ಷದ ಅದೇ ಗಂಡು ಹುಲಿಯೇ ಅಪಘಾತದಲ್ಲಿ ಮರಣ ಹೊಂದಿದೆ ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಎಪಿಸಿಸಿಎಫ್) ಕುಮಾರ್ ಪುಷ್ಕರ್ ಶಂಕೆ ವ್ಯಕ್ತಪಡಿಸಿದ್ದಾರೆ.
ಕಾರೊಂದು ಹುಲಿಗೆ ಡಿಕ್ಕಿ ಹೊಡೆದ ಪರಿಣಾಮ ಹುಲಿ ಸ್ಥಳದಲ್ಲಿಯೇ ಮೃತಪಟ್ಟಿದೆ. ಈ ಘಟನೆಯ ನಂತರ ಒಂದೂವರೆ ವರ್ಷದ ಹುಲಿಯಲ್ಲಿ ಹೆದ್ದಾರಿಯ ಪೊದೆಗೆ ಎಸೆಯಲಾಯಿತು ಎಂದು ವರದಿಯಾಗಿದೆ, ಅಲ್ಲಿಂದ ಅರಣ್ಯ ಸಿಬ್ಬಂದಿ ಶವವನ್ನು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಹುಲಿಗೆ ಡಿಕ್ಕಿ ಹೊಡೆದ ಕಾರು ಭಾಗಶಃ ಜಖಂಗೊಂಡಿದ್ದು, ವಶಕ್ಕೆ ಪಡೆಯಲಾಗಿದೆ. ಕಾರಿನಲ್ಲಿದ್ದವರನ್ನೂ ವಿಚಾರಣೆಗೆ ಒಳಪಡಿಸಿದ್ದು, ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಘಟನಾ ಸ್ಥಳಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಡಾ.ಮಾಲತಿ ಪ್ರಿಯಾ, ಅರಣ್ಯಾಧಿಕಾರಿಗಳಾದ ಲಕ್ಷ್ಮೀನಾರಾಯಣ, ಸುರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…