ಮೈಸೂರು: ರಸ್ತೆ ದಾಟುತಿದ್ದ ಹುಲಿಗೆ ಕಾರೊಂದು ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹುಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ನಂಜನಗೂಡು ಹೆದ್ದಾರಿಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಮೈಸೂರು ನಗರದಲ್ಲಿ ತನ್ನ ಮೂರು ಮರಿಗಳೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಸುಮಾರು ಒಂದೂವರೆ ವರ್ಷದ ಅದೇ ಗಂಡು ಹುಲಿಯೇ ಅಪಘಾತದಲ್ಲಿ ಮರಣ ಹೊಂದಿದೆ ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಎಪಿಸಿಸಿಎಫ್) ಕುಮಾರ್ ಪುಷ್ಕರ್ ಶಂಕೆ ವ್ಯಕ್ತಪಡಿಸಿದ್ದಾರೆ.
ಕಾರೊಂದು ಹುಲಿಗೆ ಡಿಕ್ಕಿ ಹೊಡೆದ ಪರಿಣಾಮ ಹುಲಿ ಸ್ಥಳದಲ್ಲಿಯೇ ಮೃತಪಟ್ಟಿದೆ. ಈ ಘಟನೆಯ ನಂತರ ಒಂದೂವರೆ ವರ್ಷದ ಹುಲಿಯಲ್ಲಿ ಹೆದ್ದಾರಿಯ ಪೊದೆಗೆ ಎಸೆಯಲಾಯಿತು ಎಂದು ವರದಿಯಾಗಿದೆ, ಅಲ್ಲಿಂದ ಅರಣ್ಯ ಸಿಬ್ಬಂದಿ ಶವವನ್ನು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಹುಲಿಗೆ ಡಿಕ್ಕಿ ಹೊಡೆದ ಕಾರು ಭಾಗಶಃ ಜಖಂಗೊಂಡಿದ್ದು, ವಶಕ್ಕೆ ಪಡೆಯಲಾಗಿದೆ. ಕಾರಿನಲ್ಲಿದ್ದವರನ್ನೂ ವಿಚಾರಣೆಗೆ ಒಳಪಡಿಸಿದ್ದು, ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಘಟನಾ ಸ್ಥಳಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಡಾ.ಮಾಲತಿ ಪ್ರಿಯಾ, ಅರಣ್ಯಾಧಿಕಾರಿಗಳಾದ ಲಕ್ಷ್ಮೀನಾರಾಯಣ, ಸುರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…