BREAKING NEWS

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ: ಮತ್ತೊಂದು ಟೋಲ್ ಕೇಂದ್ರ ಶೀಘ್ರ ಆರಂಭ!

ಬೆಂಗಳೂರು: ಉದ್ಘಾಟನೆಯಾದಾಗಿನಿಂದ ಒಂದಿಲ್ಲೊಂದು ಸಮಸ್ಯೆ, ವಿವಾದಗಳಲ್ಲಿ ಸಿಲುಕುತ್ತಲೇ ಇರುವ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿದೆ. ಇತ್ತೀಚೆಗೆ, ಇದೇ ಟೋಲ್ ಹೆಚ್ಚಳ ಮಾಡಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಈಗ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ವಸೂಲಿ ಕೇಂದ್ರವನ್ನು ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಸಿದ್ಧತೆಗಳನ್ನು ಆರಂಭಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿಯಿರುವ ಗಣಂಗೂರುನಲ್ಲಿ ಟೋಲ್ ಕೇಂದ್ರ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಪ್ರಾಯಶಃ ಕೆಲವೇ ದಿನಗಳಲ್ಲೇ ಟೋಲ್ ಸಂಗ್ರಹಣೆ ಆರಂಭವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಆದರೆ, ಈ ಬಗ್ಗೆ ಜನರಿಂದ ಅಸಮಾಧಾನ ಹೊರಬೀಳಲಾರಂಭಿಸಿದೆ.

ದರ ಎಷ್ಟು?: ಏಕಮುಖ ಸಂಚಾರದ ವಿವರ ಹೀಗಿದೆ. ಕಾರು, ಜೀಪು, ವ್ಯಾನ್ ಗಳಿಗೆ ತಲಾ 155 ರೂ.ಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ. ಲಘು ವಾಣಿಜ್ಯ ವಾಹನಗಳಿಗೆ ತಲಾ 250 ರೂ.ಗಳ ಶುಲ್ಕ ಪಡೆಯಲಾಗುತ್ತದೆ. ಲಘು ಸರಕು ವಾಹನ (ಮಿನಿ ಬಸ್ ಇತ್ಯಾದಿ) ತಲಾ 250 ರೂ. ವಿಧಿಸಲಾಗುತ್ತದೆ. ಎರಡು ಆ್ಯಕ್ಸೆಲ್ ಇರುವ ಟ್ರಕ್ ಹಾಗೂ ಬಸ್ಸುಗಳಿಗೆ 525 ರೂ., ಮೂರು ಆ್ಯಕ್ಸೆಲ್ ಇರುವ ವಾಣಿಜ್ಯ ವಾಹನಕ್ಕೆ 575 ರೂ., ಬಹು ಆ್ಯಕ್ಸೆಲ್ ವಾಹನ ಅಂದರೆ 4ರಿಂದ 6 ಆ್ಯಕ್ಸೆಲ್ ಇರುವ ವಾಹನಕ್ಕೆ 625 ರೂ.ಗಳ ಶುಲ್ಕ ನಿಗದಿಪಡಿಸಲಾಗಿದೆ.

ಇತ್ತೀಚೆಗಷ್ಟೇ ಪರಿಷ್ಕರಣೆಯಾಗಿದ್ದ ಶುಲ್ಕ; ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಈಗಾಗಲೇ ಎರಡು ಟೋಲ್ ವಸೂಲಿ ಕೇಂದ್ರಗಳಿವೆ. ಬೆಂಗಳೂರಿನಿಂದ ಹೊರಡುವಾಗ ರಾಮನಗರದ ಬಳಿಯ ಕಣಮಿಣಿಕೆ ಬಳಿಯೇ ಶುಲ್ಕ ವಸೂಲಾತಿ ಕೇಂದ್ರವಿದೆ. ಇಲ್ಲಿ ಈ ಮೊದಲು ಕಾರು, ಜೀಪು, ವ್ಯಾನ್ ಗಳಿಗೆ 135 ರೂ. ಇತ್ತು. ಮಿನಿ ಬಸ್ ಗಳಿಗೆ 220 ರೂ. ಇತ್ತು. ಟ್ರಕ್ ಮತ್ತು ಬಸ್ಸುಗಳಿಗೆ 460 ರೂ.ಗಳಿದ್ದವು. ವಾಣಿಜ್ಯ ವಾಹನಗಳಿಗೆ ಏಕಮುಖ ಸಂಚಾರಕ್ಕೆ 500 ರೂ.ಗಳನ್ನು ಚಾರ್ಜ್ ಇತ್ತು.

ಇತ್ತೀಚೆಗಷ್ಟೇ ಈ ಶುಲ್ಕವನ್ನು ಹೆಚ್ಚಿಸಲಾಗಿತ್ತು. ಕಾರು, ಜೀಪು, ವ್ಯಾನುಗಳಿಗೆ 135 ರೂ.ಗಳಿಂದ 165 ರೂ.ಗಳಿಗೆ, ಮಿನಿ ಬಸ್ ಗಳಿಗೆ 220 ರೂ.ಗಳಿಂದ 270 ರೂ.ಗಳನ್ನು, ಟ್ರಕ್ – ಬಸ್ಸುಗಳಿಗೆ 460 ರೂ.ಗಳಿಂದ 565 ರೂ.ಗಳಿಗೆ ಏರಿಕೆಯಾಗಿತ್ತು. ವಾಣಿಜ್ಯ ವಾಹನಗಳು 500 ರೂ.ಗಳಿಂದ 615 ರೂ.ಗಳಿಗೆ ಏರಿಕೆಯಾಗಿತ್ತು.

ಜನರ ಅಸಮಾಧಾನಕ್ಕೆ ಕಾರಣವೇನು?: ಬೆಂಗಳೂರು – ಮೈಸೂರು ಹೆದ್ದಾರಿಯ ಅಪೂರ್ಣ ಕಾಮಗಾರಿಯು, ಹೆದ್ದಾರಿಯ ಕೆಲವಾರು ಸ್ಥಳಗಳು ಅಪಘಾತದ ಹಾಟ್ ಸ್ಪಾಟ್ ಗಳಾಗಿ ಬದಲಾಗುತ್ತಿರುವುದು, ಮತ್ತು ಆ ಬಗ್ಗೆ ಯಾವುದೇ ರೀತಿಯ ನಿವಾರಣೋಪಾಯಗಳನ್ನು ಕಲ್ಪಿಸದೇ ಇರುವುದಕ್ಕೆ ಸಾರ್ವಜನಿಕರು ತೀವ್ರವಾದ ಆಕ್ಷೇಪ ಹೊರಹಾಕುತ್ತಿದ್ದಾರೆ. ಅಲ್ಲದೆ, ಇಡೀ ಹೆದ್ದಾರಿ ನಿರ್ಮಾಣದ ಪ್ಲಾನಿಂಗ್ ಅನ್ನು ಅವೈಜ್ಞಾನಿಕವಾಗಿ ರೂಪಿಸಲಾಗಿದೆ ಎಂಬುದು ಹಲವಾರು ಜನರ ಆರೋಪ.

andolanait

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago