BREAKING NEWS

ಮೈಸೂರು | ನಿನ್ನನ್ನೇ ನಂಬಿದ್ದೇನೆ, ಕೈಬಿಡಬೇಡ: ಯಡಿಯೂರಪ್ಪ ಆಪ್ತಗೆ ಸೋಮಣ್ಣ ಮನವಿ

ಮೈಸೂರು: ‘ನಿನ್ನನ್ನೇ ನಂಬಿದ್ದೇನೆ, ದಯವಿಟ್ಟು ಕೈಬಿಡಬೇಡ. ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ಅವರನ್ನು ಮೇಲಿನಂತೆ ಕೇಳಿಕೊಂಡರು.

ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿದ್ದಲಿಂಗಸ್ವಾಮಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ್ದ ಸೋಮಣ್ಣ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. ಚುನಾವಣೆಯಲ್ಲಿ ಬೆಂಬಲ ಕೊಡುವಂತೆ ಕೋರಿಕೊಂಡರು. ಅಲ್ಲೇ ಉಪಹಾರ ಸೇವಿಸಿದರು.

‘ನಿನ್ನ ಬಗ್ಗೆ ನಾನು ಏನನ್ನೂ ಅಂದುಕೊಂಡಿಲ್ಲ. ನನ್ನನ್ನು ಬೆಂಬಲಿಸು. ನೀನೇ ನನ್ನ ಸೈನ್ಯದ ಕಮಾಂಡರ್ ಆಗಿ ಕೆಲಸ ಮಾಡು’ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದಲಿಂಗಸ್ವಾಮಿ, ‘ನಮ್ಮ ಮನೆಯಿಂದಲೇ ಪ್ರಚಾರ ಕಾರ್ಯ ಪ್ರಾರಂಭಿಸಬೇಕು ಎಂದು ವಿಶೇಷ ಪೂಜೆ ಇಟ್ಟುಕೊಂಡಿದ್ದೇನೆ. ಬೆಳಿಗ್ಗೆಯಿಂದಲೇ ನಿಮ್ಮ ಹೆಸರಲ್ಲಿ ಪೂಜೆ ನಡೆಸಿರುವೆ. ನಿಮ್ಮ ರಾಶಿ–ನಕ್ಷತ್ರ ಹೇಳಿ ಪೂಜೆ ಮಾಡಿಸಿದ್ದೇನೆ. ಈ ಬಾರಿ ನೀವು ಗೆಲ್ಲುತ್ತೀರಿ’ ಎಂದರು. ಸೋಮಣ್ಣ ಅವರಿಂದಲೂ ಪೂಜೆ ಮಾಡಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸೋಮಣ್ಣ, ‘ಸಿದ್ದಲಿಂಗಸ್ವಾಮಿ ನನ್ನ ಸಹೋದರ ಇದ್ದಂತೆ. ಯಾವುದೋ ಜನ್ಮದಲ್ಲಿ ಅಣ್ಣನೋ, ತಮ್ಮನೋ ಆಗಿದ್ದ ಎನಿಸುವಂತಹ ಬಾಂಧವ್ಯವಿದೆ. ಅವರಿಗೆ ವರುಣ ಕ್ಷೇತ್ರದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಜವಾಬ್ದಾರಿಗಳನ್ನು ನೀಡಿದ್ದೇನೆ. ವರುಣದಲ್ಲಿ ಪ್ರಚಾರಕ್ಕೆ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮೊದಲಾದವರು ಬರಲಿದ್ದಾರೆ’ ಎಂದು ತಿಳಿಸಿದರು.

‘ಪ್ರಚಾರದಲ್ಲಿ ತೊಡಗುವೆ. ವಾರದ ಬಳಿಕ ಕ್ಷೇತ್ರದ ವಾತಾವರಣ ತಿಳಿಯುತ್ತದೆ. ಅಭಿವೃದ್ಧಿಯ ವಿಷಯದಲ್ಲಿ ವರುಣವನ್ನು ಮತ್ತೊಂದು ಗೋವಿಂದರಾಜ ನಗರ ಕ್ಷೇತ್ರ ಮಾಡುವ ಗುರಿ ಹೊಂದಿದ್ದೇನೆ’ ಎಂದು ಹೇಳಿದರು.

ಕಾಪು ಸಿದ್ದಲಿಂಗಸ್ವಾಮಿ ನಿವಾಸಕ್ಕೆ ಅವರು ಬರುತ್ತಿದ್ದಂತೆ ಅಭಿಮಾನಿಗಳಿಂದ, ‘ಮುಂದಿನ ಮುಖ್ಯಮಂತ್ರಿ ಸೋಮಣ್ಣ’ ಎಂಬ ಘೋಷಣೆ‌ ಮೊಳಗಿತು.

andolanait

Recent Posts

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

18 mins ago

ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

23 mins ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

29 mins ago

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

1 hour ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

2 hours ago

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

2 hours ago