BREAKING NEWS

ಮೈಸೂರು | ನಿನ್ನನ್ನೇ ನಂಬಿದ್ದೇನೆ, ಕೈಬಿಡಬೇಡ: ಯಡಿಯೂರಪ್ಪ ಆಪ್ತಗೆ ಸೋಮಣ್ಣ ಮನವಿ

ಮೈಸೂರು: ‘ನಿನ್ನನ್ನೇ ನಂಬಿದ್ದೇನೆ, ದಯವಿಟ್ಟು ಕೈಬಿಡಬೇಡ. ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ಅವರನ್ನು ಮೇಲಿನಂತೆ ಕೇಳಿಕೊಂಡರು.

ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿದ್ದಲಿಂಗಸ್ವಾಮಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ್ದ ಸೋಮಣ್ಣ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. ಚುನಾವಣೆಯಲ್ಲಿ ಬೆಂಬಲ ಕೊಡುವಂತೆ ಕೋರಿಕೊಂಡರು. ಅಲ್ಲೇ ಉಪಹಾರ ಸೇವಿಸಿದರು.

‘ನಿನ್ನ ಬಗ್ಗೆ ನಾನು ಏನನ್ನೂ ಅಂದುಕೊಂಡಿಲ್ಲ. ನನ್ನನ್ನು ಬೆಂಬಲಿಸು. ನೀನೇ ನನ್ನ ಸೈನ್ಯದ ಕಮಾಂಡರ್ ಆಗಿ ಕೆಲಸ ಮಾಡು’ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದಲಿಂಗಸ್ವಾಮಿ, ‘ನಮ್ಮ ಮನೆಯಿಂದಲೇ ಪ್ರಚಾರ ಕಾರ್ಯ ಪ್ರಾರಂಭಿಸಬೇಕು ಎಂದು ವಿಶೇಷ ಪೂಜೆ ಇಟ್ಟುಕೊಂಡಿದ್ದೇನೆ. ಬೆಳಿಗ್ಗೆಯಿಂದಲೇ ನಿಮ್ಮ ಹೆಸರಲ್ಲಿ ಪೂಜೆ ನಡೆಸಿರುವೆ. ನಿಮ್ಮ ರಾಶಿ–ನಕ್ಷತ್ರ ಹೇಳಿ ಪೂಜೆ ಮಾಡಿಸಿದ್ದೇನೆ. ಈ ಬಾರಿ ನೀವು ಗೆಲ್ಲುತ್ತೀರಿ’ ಎಂದರು. ಸೋಮಣ್ಣ ಅವರಿಂದಲೂ ಪೂಜೆ ಮಾಡಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸೋಮಣ್ಣ, ‘ಸಿದ್ದಲಿಂಗಸ್ವಾಮಿ ನನ್ನ ಸಹೋದರ ಇದ್ದಂತೆ. ಯಾವುದೋ ಜನ್ಮದಲ್ಲಿ ಅಣ್ಣನೋ, ತಮ್ಮನೋ ಆಗಿದ್ದ ಎನಿಸುವಂತಹ ಬಾಂಧವ್ಯವಿದೆ. ಅವರಿಗೆ ವರುಣ ಕ್ಷೇತ್ರದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಜವಾಬ್ದಾರಿಗಳನ್ನು ನೀಡಿದ್ದೇನೆ. ವರುಣದಲ್ಲಿ ಪ್ರಚಾರಕ್ಕೆ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮೊದಲಾದವರು ಬರಲಿದ್ದಾರೆ’ ಎಂದು ತಿಳಿಸಿದರು.

‘ಪ್ರಚಾರದಲ್ಲಿ ತೊಡಗುವೆ. ವಾರದ ಬಳಿಕ ಕ್ಷೇತ್ರದ ವಾತಾವರಣ ತಿಳಿಯುತ್ತದೆ. ಅಭಿವೃದ್ಧಿಯ ವಿಷಯದಲ್ಲಿ ವರುಣವನ್ನು ಮತ್ತೊಂದು ಗೋವಿಂದರಾಜ ನಗರ ಕ್ಷೇತ್ರ ಮಾಡುವ ಗುರಿ ಹೊಂದಿದ್ದೇನೆ’ ಎಂದು ಹೇಳಿದರು.

ಕಾಪು ಸಿದ್ದಲಿಂಗಸ್ವಾಮಿ ನಿವಾಸಕ್ಕೆ ಅವರು ಬರುತ್ತಿದ್ದಂತೆ ಅಭಿಮಾನಿಗಳಿಂದ, ‘ಮುಂದಿನ ಮುಖ್ಯಮಂತ್ರಿ ಸೋಮಣ್ಣ’ ಎಂಬ ಘೋಷಣೆ‌ ಮೊಳಗಿತು.

andolanait

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

39 mins ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

5 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

5 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

5 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

5 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

8 hours ago