BREAKING NEWS

ಜಾಗತಿಕ ಮಟ್ಟದ ಮನ್ನಣೆ ಪಡೆದುಕೊಂಡ ಕನ್ನಡಿಗರ ಹೆಮ್ಮೆಯ ಮೈಸೂರ್ ಪಾಕ್​

ಮೈಸೂರು : ಒಂದೊಂದು ಊರಿಗೆ ಹೋದಾಗಲೂ ಒಂದೊಂದು ಆಹಾರದ ವಿಶೇಷತೆಗಳು ಇರುತ್ತವೆ. ಅವು ಕೆಲ ಪ್ರದೇಶಗಳಿಗೆ ಮಾತ್ರ ಫೇಮಸ್​ ಆಗಿವೆ. ಆದ್ರೆ, ತನ್ನ ಹೆಸರಿನಲ್ಲಿಯೇ ಮೈಸೂರನ್ನು ಪ್ರತಿನಿಧಿಸುವ ಮೈಸೂರ್‌ ಪಾಕ್‌ ದೇಶ ವಿದೇಶಗಳ ತನಕ ಹೆಸರು ವಾಸಿಯಾಗಿದೆ. ಇದೀಗ ಈ ಮೈಸೂರುಪಾಕ್​ ವಿಶ್ವದ ಸ್ಟ್ರೀಟ್​ ಫುಡ್​ನಲ್ಲಿ 14ನೇ ಸ್ಥಾನ ಪಡೆದುಕೊಂಡಿದೆ.

ಮೈಸೂರು ಅರಸರ ಕಾಲದಲ್ಲಿ ತಯಾರಾಗಿದ್ದ ಮೈಸೂರುಪಾಕ್, ಮೈಸೂರು ಅಂದ್ರೆ ಮೈಸೂರುಪಾಕ್ ಎನ್ನುವಷ್ಟು ಖ್ಯಾತಿ ಗಳಿಸಿದ್ದು, ಇದೀಗ ಜಾಗತಿಕ ಮಟ್ಟದ ಮನ್ನಣೆ ಪಡೆದುಕೊಂಡಿದೆ. 4.4 ರೇಟಿಂಗ್ ಪಡೆದ ಮೈಸೂರುಪಾಕ್, ಆನ್‌ಲೈನ್‌ ಮಾರ್ಕೆಟ್​ನಲ್ಲಿ ವಿಶ್ವದ 50 ತಿಂಡಿ ತಿನಿಸುಗಳಲ್ಲಿ ಸ್ಥಾನ ಪಡೆದುಕೊಂಡಿದೆ. ಇನ್ನು ಕುಲ್ಫಿಗೆ 18ನೇ ಸ್ಥಾನ, ಕುಲ್ಫಿ ಫಲೂದಾಗೆ 32ನೇ ಸ್ಥಾನ ಸಿಕ್ಕಿದೆ.

ಟೇಸ್ಟ್ ಅಟ್ಲಾಸ್, ವಿಶ್ವದ ಬೆಸ್ಟ್ ಸ್ಟ್ರೀಟ್ ಫುಡ್ ಸ್ವೀಟ್​ನ ಟಾಪ್ 50​ ಪಟ್ಟಿ ಬಿಡುಗಡೆ ಮಾಡಿದ್ದು,  ಇದರಲ್ಲಿ ಮೈಸೂರುಪಾಕ್​ಗೆ 4.4 ರೇಟಿಂಗ್​ನಿಂದಿಗೆ 14ನೇ ಸ್ಥಾನ​ ಸಿಕ್ಕಿದೆ. ಇನ್ನು ಕುಲ್ಫಿಗೆ 4.3 ರೇಟಿಂಗ್​ ನೋಂದಿಗೆ 18ನೇ ಸ್ಥಾನ ನೀಡಲಾಗಿದೆ. ಫಲೂದಾ 4.0 ರೇಟಿಂಗ್​ನೊಂದಿಗೆ 32ನೇ ಸ್ಥಾನ ಪಡೆದುಕೊಂಡಿದೆ.

ಇಂತಹ ಮೈಸೂರ್ ಪಾಕ್ ನಮ್ಮ ಮೈಸೂರಿನಲ್ಲಿಯೇ ತಯಾರಾಗಿದ್ದು ಎನ್ನುವುದೇ ಕನ್ನಡಿಗರೆಲ್ಲರಿಗೂ ಹೆಮ್ಮೆ ತರುವ ವಿಚಾರ. ಅಷ್ಟೇ ಅಲ್ಲದೆ ದೇಶ ವಿದೇಶಗಳಿಗೆ ಮೈಸೂರಿನ ಹೆಸರನ್ನು ಪರಿಚಯಿಸಿದ ಸಿಹಿ ತಿನಿಸು ಕೂಡ ಹೌದು. ಇಂತಹ ತಿನಿಸು ಮೈಸೂರು ಅರಮನೆಯ ಪಾಕಶಾಲೆಯಲ್ಲಿಯೇ ತಯಾರಾಗಿದ್ದು ಎನ್ನುವುದೇ ಸಂತಸದ ವಿಚಾರ.

andolanait

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

57 mins ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

1 hour ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

6 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

7 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

7 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

7 hours ago