Mysore
31
overcast clouds

Social Media

ಶನಿವಾರ, 20 ಜೂನ್ 2026
Light
Dark

ಮೈಸೂರಿನ ಪಿಎಸ್​ಐ ಅಶ್ವಿನಿ ಅನಂತಪುರ ಅಮಾನತು

ಮೈಸೂರು: ನಗರದ ಎನ್.ಆರ್. ಸಂಚಾರ ವಿಭಾಗದ ಪಿಎಸ್ಐ  ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶ್ವಿನಿ ಅನಂತಪುರ  ಅವರನ್ನು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಅಮಾನತು ಮಾಡಿ ಆದೇಶವನ್ನು ಹೊರಡಿಸಿದ್ದಾರೆ.
ಕೆಪಿಎಸ್​ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದಾಖಲೆಗಳ ಸಮೇತ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಬಾಗಲಕೋಟೆಯ ಸಂಗಮೇಶ್ ಝಳಕಿ ಜತೆ ಹಣದ ವ್ಯವಹಾರದ ಬಗ್ಗೆ ಸಂಭಾಷಣೆ ನಡೆಸಿರೊ ಆಡಿಯೋ, ವಾಟ್ಸಪ್ ಚಾಟಿಂಗ್, ಬ್ಯಾಂಕ್ ವಿವರಗಳನ್ನು ಲಕ್ಷ್ಮಣ್ ಬಹಿರಂಗಗೊಳಿಸಿದ್ದರು. ಪ್ರಕರಣವನ್ನು ಪರಿಗಣಿಸಿದ ನಗರ ಪೊಲೀಸ್ ಆಯುಕ್ತರು ವಿಚಾರಣೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!