BREAKING NEWS

ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ದಿಗೆ 493 ಕೋಟಿ ರೂ.

ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣಕ್ಕೂ ಯೋಜನೆ: ಸಂಸದ ಪ್ರತಾಪಸಿಂಹ

ಮೈಸೂರು:ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ಧಿ ಹಾಗೂ ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣದ ೪೯೩ ಕೋಟಿ ರೂ.ಯೋಜನೆಗೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ರೈಲ್ವೆ ಸಚಿವಾಲಯದಿಂದ ಅನುಮತಿ ದೊರೆತಿದ್ದು ಶೀಘ್ರದಲ್ಲೇ ಯೋಜನೆಯನ್ನು ಕಾರ್ಯಗತಗೊಳಿಸಲು ಅಗತ್ಯ ಕ್ರಮವನ್ನು ರೈಲ್ವೆ ಇಲಾಖೆ ಕೈಗೊಳ್ಳಲಿದೆ ಎಂದು ಮೈಸೂರು- ಕೊಡಗು ಕ್ಷೇತ್ರ ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ನಗರದ ರೈಲ್ವೆಭವನದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಾರ್ಯಾಲಯದ ಸಭಾಂಗಣದಲ್ಲಿ ಕೇಂದ್ರ ರೈಲ್ವೆ ಸಚಿವಾಲಯದಿಂದ ಅನುಮೋದನೆ ದೊರೆತಿರುವ ಪ್ರಮುಖ ಯೋಜನೆಗಳ ಅನುಷ್ಟಾನ ಕುರಿತು ಗುರುವಾರ ನಡೆದ ವಿವಿಧ ರೈಲ್ವೆ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.

ಜನವರಿ ವೇಳೆಗೆ ಟೆಂಡರಿಂಗ್ ಕೆಲಸವಾಗಲಿದೆ. ೨೦೨೩ರ ಜೂನ್ ವೇಳೆಗೆ ಈ ಕಾರ್ಯ ಪೂರ್ಣಗೊಳ್ಳಲಿದೆ. ರಾಜ್ಯ ಸರ್ಕಾರ ತನ್ನಪಾಲಿನ ೧೧೯ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಹಾಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುವುದಾಗಿ ಹೇಳಿದರು

೫೩. ೧ ಕೋಟಿ ರೂ. ವೆಚ್ಚದಲ್ಲಿ ಮೈಸೂರು ರೈಲು ನಿಲ್ದಾಣ ಮರು ಅಭಿವೃದ್ಧಿಪಡಿಸಲು ೩ ಹಂತದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗುವುದು.ಮೊದಲ ಹಂತವಾಗಿ ಕ್ವಾಟ್ರಸ್‌ಗಳು ಮತ್ತು ಕಚೇರಿಗಳ ನಿರ್ಮಾಣ ಮಾಡಲಾಗುವುದು. ಈ ಕಾರ್ಯಕ್ಕಾಗಿ ಈ ವ್ಯಾಪ್ತಿಗೆ ಬರುವ ರೈಲ್ವೆ ಕ್ವಾಟ್ರಸ್‌ಗಳನ್ನು ತೆರವುಗೊಳಿಸಲಾಗುವುದು. ಅಲ್ಲಿ ವಾಸವಿರುವವರಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವವರೆಗೆ ನಗರದ ವಿವಿಧಕಡೆ ಖಾಸಗಿ ಅಪಾರ್ಟ್‌ಮೆಂಟ್‌ಗಳಲ್ಲಿ ತಾತ್ಕಾಲಿಕವಾಗಿ ವಾಸಕ್ಕೆ ಉತ್ತಮ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಮೈಸೂರು ನಿಲ್ದಾಣ ಪ್ರದೇಶ ಮೇಲ್ದರ್ಜೆಗೇರಿಸುವುದು ಮತ್ತು ೩ ನೇ ಹಂತದಲ್ಲಿ ನಾಗನಹಳ್ಳಿಯಲ್ಲಿ ಯಾರ್ಡ್ ನಿರ್ಮಾಣ ಮಾಡಲಾಗುವುದು.ನಾಗನಹಳ್ಳಿ ಸ್ಯಾಟಲೈಟ್ ಟ್ರಕ್‌ಟರ್ಮಿನಲ್ ನಿರ್ಮಾಣಕ್ಕಾಗಿ ಈ ಮಾರ್ಗದ ಶಾಲೆಗಳ ತೆರವು, ಭೂಮಿ ಪಡೆಯುವುದು,ಈ ಮಾರ್ಗದಲ್ಲಿ ಬರುವ ಮರಗಳ ತೆರವಿಗಾಗಿ ಸಂಬಂಧಪಟ್ಟವರಿಗೆ ಪತ್ರ ಬರೆದು ಚರ್ಚಿಸಲಾಗಿದೆ. ಈ ಕೆಲಸ ನಿರ್ವಹಿಸಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವಿವರಿಸಿದರು.

 

ಕುಶಾಲನಗರ ರೈಲು ಯೋಜನೆ

ಮೈಸೂರು- ಕುಶಾಲನಗರ ನಡುವಿನ ೮೭ ಕಿ.ಮೀ. ಉದ್ದದ ನೂತನ ರೈಲು ಯೋಜನೆ ಅನುಷ್ಟಾನಕ್ಕೆ ಈಗಾಗಲೇ ೧೮೫೪ ಕೋಟಿ ರೂ.ಬಿಡುಗಡೆಯಾಗಿದೆ. ಶೀಘ್ರದಲ್ಲಿ ಟೆಂಡರ್ ನೀಡುವ ಸಲುವಾಗಿ ಅಗತ್ಯ ಭೂಮಿ ಪಡೆಯಲು ಸರ್ವೇ ಕಾರ್ಯ ಪ್ರಗತಿಯಲ್ಲಿದೆ.ಈ ರೈಲು ಮಾರ್ಗದಲ್ಲಿ ಬೆಳಗೊಳ,ಇಲವಾಲ, ಬಿಳಿಕೆರೆ,ಉದ್ದೂರು, ಹುಣಸೂರು, ಸತ್ಯಗಾಲ,ಪಿರಿಯಾಪಟ್ಟಣ,ದೊಡ್ಡಹೊನ್ನೂರು,ಕುಶಾಲನಗರ ಸೇರಿದಂತೆ ಒಟ್ಟು ೯ ರೈಲ್ವೆ ನಿಲ್ದಾಣಗಳ ಬರಲಿವೆ. ಈ ರೈಲುಮಾರ್ಗದ ಸಂಚಾರ ವೇಗ ಗಂಟೆಗೆ ೧೬೦ ಕಿ.ಮೀ ಆಗಿದ್ದು ಕೊಡಗು ಮತ್ತು ಮೈಸೂರು ಜನತೆಗೆ ಇದರ ಸೇವೆ ಲಭ್ಯವಾಗಲಿದೆ ಎಂದರು.

ಅಶೋಕಪುರಂ ರೈಲು ನಿಲ್ದಾಣ ಮೇಲ್ದರ್ಜೆಗೆ

ಅಶೋಕಪುರಂ ನಿಲ್ದಾಣವನ್ನು ಅಭಿವೃದ್ಧಿಗೊಳಸಲು ಮೊದಲ ಹಂತದಲ್ಲಿ ೧೫.೧೭ ಕೋಟಿ ರೂ. ಮತ್ತು ಎರಡನೇ ಹಂತದಲ್ಲಿ ೧೩.೩೯ ಕೋಟಿ ರೂ. ಬಿಡುಗಡೆ ಯಾಗಿದ್ದು ಮೂರು ಹೆಚ್ಚುವರಿ ಪ್ಲಾಟ್ ಫಾರ್ಮ್‌ಲೈನ್‌ಗಳ ನಿರ್ಮಾಣ ಮತ್ತು ಈಗ ಇರುವ ಪ್ಲಾಟ್ ಫಾರ್ಮ್‌ಗಳ ವಿಸ್ತರಣೆ, ವರ್ಕ್‌ಶಾಪ್‌ಗೆ ತೆರಳಲು ಎರಡು ಮಾರ್ಗಗಳ ರಚನೆ,ಕೋಚ್‌ಗಳನ್ನು ಸ್ವಚ್ಛಗೊಳಿಸಲು ನೀರು ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ೫೩೧೦ ಚದರಡಿ ಹಾಗೂ ೩೪೪ ಚದರಡಿ ಖಾಸಗಿ ಜಾಗದ ಅವಶ್ಯಕತೆ ಇದ್ದು ಈ ಕೆಲಸವನ್ನು ಶೀಘ್ರದಲ್ಲಿ ಮುಗಿಸಿ ಕೆಲಸ ಆರಂಭಿಸಲಾಗುವುದು ಎಂದು ಪ್ರತಾಪಸಿಂಹ ಹೇಳಿದರು.

 

ಸಿಂಹ ಹೇಳಿದ್ದೇನು?

ಕುಕ್ಕರಹಳ್ಳಿ ಕೆರೆ ಎದುರಿನ ಗೇಟ್ ಸ್ಥಳದಲ್ಲಿ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ೨೬.೫೪ ಕೋಟಿ ರೂ ಬಿಡುಗಡೆಗೊಂಡಿದೆ

ಕೆಆರ್‌ಎಸ್ ರಸ್ತೆಯಲ್ಲಿ ರೈಲ್ವೆ ಮೇಲು ಸೇತುವೆ ಕೆಲಸ ಕಾರ್ಯಗತಕ್ಕೆ ೪೧.೮೨ ಕೋಟಿ ರೂ. ಬಿಡುಗಡೆಯಾಗಿದೆ.

ಮೈಸೂರು-ಚಾಮರಾಜನಗರ ನಡುವೆ ಎಲೆಕ್ಟ್ರಿಕ್ ರೈಲು ಸಂಚಾರಕ್ಕೆ ಅಗತ್ಯವಾದ ಎಲ್ಲ ಕೆಲಸ ಪೂರ್ಣಗೊಂಡಿದೆ.

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸ್ಥಳಾಭಾವದಿಂದ ರೈಲುಗಳ ಸಂಚಾರ ಚಾಮರಾಜನಗರಕ್ಕೆ ವಿಸ್ತರಿಸಲು ಯೋಜನೆ

ಕಡಕೊಳ ರೈಲು ನಿಲ್ದಾಣದ ಬಳಿ ಮಲ್ಟಿ ಮಾಡೆಲ್ ಲಾಜಿಸ್ಟಿಕ್ ಪಾರ್ಕ್ ೨.೫ ಕೋಟಿ ರೂ. ಬಿಡುಗಡೆ

ಯಾದವಗಿರಿ ಬಳಿ ಹೊಸ ಟರ್ಮಿನಲ್ ನಿರ್ಮಾಣ,ಹೊಸ ಸ್ಟೇಷನ್,ಬೆಳಗೊಳದಲ್ಲಿ ೨ ಸ್ಟೆಬಲಿಂಗ್ ಲೈನ್.


 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಯೋಗದಿನದಂದು ಮೈಸೂರಿಗೆ ಆಗಮಿಸಿದ್ದ ವೇಳೆ ೧೦ ಮಾರ್ಗಗಳ ಹೈವೇ ಸ್ಯಾಟಲೈಟ್ ಟರ್ಮಿನಲ್ ಘೋಷಣೆ ಮಾಡಿದ್ದರು.ಜಾಗದ ಸಮಸ್ಯೆ ತೊಡಕಾಗಿತ್ತು. ಈಗ ಈ ಯೋಜನೆ ಅನುಷ್ಟಾನಗೊಳಿಸಲು ಅವಕಾಶ ದೊರೆತಿದೆ.

-ಪ್ರತಾಪಸಿಂಹ, ಸಂಸದ

 

andolanait

Recent Posts

ಚಿಕ್ಕಮಗಳೂರು | ಚಾರಣಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿ ನಾಪತ್ತೆ ; ತೀವ್ರ ಹುಡುಕಾಟ

ಚಿಕ್ಕಮಗಳೂರು : ಬಾಬಾಬುಡನ್‌ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು…

10 mins ago

ಕದನ ವಿರಾಮ ಬೆನ್ನಲ್ಲೇ ಕಚ್ಚಾ ತೈಲದ ದರ ದಿಢೀರ್‌ ಕುಸಿತ

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…

37 mins ago

ಪೊನ್ನಂಪೇಟೆ | ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…

53 mins ago

PUC RESULT | ನಾಳೆ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ…

1 hour ago

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

2 hours ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

3 hours ago