ಒಟ್ಟು 31. 8 ಕೋಟಿ ರೂ. ಸಂಗ್ರಹ,2.34 ಕೋಟಿ ಉಳಿಕೆ: ಉಸ್ತುವಾರಿ ಸಚಿವರ ಮಾಹಿತಿ
ಮೈಸೂರು: ಎರಡು ವರ್ಷಗಳ ಬಳಿಕ ನಡೆದ ಸಾಂಸ್ಕೃತಿಕ ನಗರದಲ್ಲಿ ನಡೆದ ಅದ್ದೂರಿ ದಸರಾ ಮಹೋತ್ಸವಕ್ಕೆ 26.54 ಕೋಟಿ ರೂ. ವ್ಯಯಿಸಲಾಗಿದೆ.
ಖರ್ಚು ವೆಚ್ಚದ ವಿವರಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳ ದಸರಾ ಉತ್ಸವ ಆಚರಣೆಗೆ ಒಟ್ಟು 31ಕೋಟಿ 8 ಲಕ್ಷ ಹಣ ಸಂಗ್ರಹವಾಗಿತ್ತು. ಇದರಲ್ಲಿ 28 ಕೋಟಿ 74 ಲಕ್ಷ ರೂಪಾಯಿ ವೆಚ್ಚವಾಗಿದೆ. ಒಟ್ಟು 2 ಕೋಟಿ 34 ಲಕ್ಷ ಉಳಿತಾಯವಾಗಿದೆ ಎಂದು ಸಚಿವರು ತಿಳಿಸಿದರು.
ಮಂಡ್ಯ, ಚಾಮರಾಜ ನಗರ, ಹಾಸನ ಜಿಲ್ಲೆಗೆ ಬಿಡುಗಡೆಯಾದ ಅನುದಾನ ಕೂಡ ಇದರಲ್ಲಿ ಸೇರಿದೆ.
ಮೈಸೂರು ದಸರಾ ಮಹೋತ್ಸವಕ್ಕೆ ಒಟ್ಟು ಖರ್ಚು 26 ಕೋಟಿ 54 ಲಕ್ಷದ 49 ಸಾವಿರದ 58 ರೂ, ಮಂಡ್ಯ, ಚಾಮರಾಜನಗರ ಮತ್ತು ಹಾಸನ ದಸರಾ ಆಚರಣೆಗೆ ಒಟ್ಟು 2 ಕೋಟಿ 20 ಲಕ್ಷ ಖರ್ಚಾಗಿದೆ ಎಂದವರು ತಿಳಿಸಿದರು.
ಮೈಸೂರಿನ ರಾಜಮನೆತನಕ್ಕೆ 47 ಲಕ್ಷ ರು. ಗೌರವಧನ ನೀಡಲಾಗಿದೆ. ಯುವದಸರಾ ಹಾಗೂ ಯುವ ಸಂಭ್ರಮಕ್ಕೆ 6 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಸಚಿವರು ವಿವರ ನೀಡಿದರು.
ಮೂಡಾದಿಂದ 10 ಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಕೋಟಿ, ಅರಮನೆ ಆಡಳಿತ ಮಂಡಳಿಯಿಂದ 5 ಕೋಟಿ, ಪ್ರಾಯೋಜಕತ್ವದಿಂದ 32 ಲಕ್ಷದ 50 ಸಾವಿರ, ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಮಾರಾಟದಿಂದ 76 ಲಕ್ಷ ಸೇರಿದಂತೆ ಒಟ್ಟು 31 ಕೋಟಿ, 8 ಲಕ್ಷದ 88 ಸಾವಿರದ 819 ರೂ. ಸಂಗ್ರಹವಾಗಿದೆ.
ಮೈಸೂರಿನ ದಸರಾ ಖರ್ಚು ವೆಚ್ಚಗಳ ಬಗ್ಗೆ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…