ಚೆನ್ನೈ: ಮೈಸೂರು ಚೆನ್ನೈ ಮಧ್ಯೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇಂದಿನಿಂದ ಟ್ರಯಲ್ ರನ್ ಆರಂಭಿಸಿದೆ. ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ರೈಲು ನಿರ್ಗಮಿಸಿದ್ದು, ಮಧ್ಯಾಹ್ನ 12.30ರ ಸುಮಾರಿಗೆ ಮೈಸೂರು ತಲುಪಲಿದೆ.
ಹೈಸ್ಪೀಡ್ ರೈಲು ಚೆನ್ನೈ ಮೈಸೂರು ಮಧ್ಯೆ 6 ಗಂಟೆ 30 ನಿಮಿಷದಲ್ಲಿ 504 ಕಿಮೀ ಸಂಚರಿಸಲಿದೆ. ಮಧ್ಯದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮಾತ್ರ ಒಂದು ಸ್ಟಾಪ್ ಇರಲಿದೆ.
ಟ್ರಯಲ್ಗಾಗಿ ವಂದೇ ಭಾರತ್ ಎಕ್ಸಪ್ರೆಸ್ ರೈಲು ಭಾನುವಾರ ಚೆನ್ನೈ ತಲುಪಿದ ಬಳಿಕ ವಿಭಾಗೀಯ ಹೆಚ್ಚುವರಿ ರೈಲ್ವೆ ಮ್ಯಾನೇಜರ್ ಭಾನುವಾರ ವಿಡಿಯೋ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. “ಕೊನೆಗೂ ಒಳ್ಳೆಯ ಸುದ್ದಿ ಬಂತು. ಟ್ರಯಲ್ ರನ್ಗಾಗಿ ವಂದೇ ಭಾರತ್ ಚೆನ್ನೈಗೆ ಬಂದಿದೆ” ಎಂದು ಬರೆದುಕೊಂಡಿದ್ದರು.
ಈ ರೈಲು ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ಲಭ್ಯ ಇರಲಿದೆ. ಸ್ವಯಂಚಾಲಿತ ಡೋರ್, ವೈಫೈ ಇಂಟರ್ನೆಟ್ ಜೊತೆ ಸುಸಜ್ಜಿತ ತಂತ್ರಜ್ಞಾನದ 16 ಕೋಚ್ಗಳನ್ನು ಇದು ಹೊಂದಿರಲಿದೆ. ನ.11 ರಂದು ಬೆಂಗಳೂರಲ್ಲಿ ಈ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…