ಚೆನ್ನೈ: ಮೈಸೂರು ಚೆನ್ನೈ ಮಧ್ಯೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇಂದಿನಿಂದ ಟ್ರಯಲ್ ರನ್ ಆರಂಭಿಸಿದೆ. ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ರೈಲು ನಿರ್ಗಮಿಸಿದ್ದು, ಮಧ್ಯಾಹ್ನ 12.30ರ ಸುಮಾರಿಗೆ ಮೈಸೂರು ತಲುಪಲಿದೆ.
ಹೈಸ್ಪೀಡ್ ರೈಲು ಚೆನ್ನೈ ಮೈಸೂರು ಮಧ್ಯೆ 6 ಗಂಟೆ 30 ನಿಮಿಷದಲ್ಲಿ 504 ಕಿಮೀ ಸಂಚರಿಸಲಿದೆ. ಮಧ್ಯದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮಾತ್ರ ಒಂದು ಸ್ಟಾಪ್ ಇರಲಿದೆ.
ಟ್ರಯಲ್ಗಾಗಿ ವಂದೇ ಭಾರತ್ ಎಕ್ಸಪ್ರೆಸ್ ರೈಲು ಭಾನುವಾರ ಚೆನ್ನೈ ತಲುಪಿದ ಬಳಿಕ ವಿಭಾಗೀಯ ಹೆಚ್ಚುವರಿ ರೈಲ್ವೆ ಮ್ಯಾನೇಜರ್ ಭಾನುವಾರ ವಿಡಿಯೋ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. “ಕೊನೆಗೂ ಒಳ್ಳೆಯ ಸುದ್ದಿ ಬಂತು. ಟ್ರಯಲ್ ರನ್ಗಾಗಿ ವಂದೇ ಭಾರತ್ ಚೆನ್ನೈಗೆ ಬಂದಿದೆ” ಎಂದು ಬರೆದುಕೊಂಡಿದ್ದರು.
ಈ ರೈಲು ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ಲಭ್ಯ ಇರಲಿದೆ. ಸ್ವಯಂಚಾಲಿತ ಡೋರ್, ವೈಫೈ ಇಂಟರ್ನೆಟ್ ಜೊತೆ ಸುಸಜ್ಜಿತ ತಂತ್ರಜ್ಞಾನದ 16 ಕೋಚ್ಗಳನ್ನು ಇದು ಹೊಂದಿರಲಿದೆ. ನ.11 ರಂದು ಬೆಂಗಳೂರಲ್ಲಿ ಈ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…