BREAKING NEWS

ಮೈಸೂರಿಗೆ ಇಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆಗಮನ

ಚೆನ್ನೈ: ಮೈಸೂರು ಚೆನ್ನೈ ಮಧ್ಯೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇಂದಿನಿಂದ ಟ್ರಯಲ್ ರನ್ ಆರಂಭಿಸಿದೆ. ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ರೈಲು ನಿರ್ಗಮಿಸಿದ್ದು, ಮಧ್ಯಾಹ್ನ 12.30ರ ಸುಮಾರಿಗೆ ಮೈಸೂರು ತಲುಪಲಿದೆ.

ಹೈಸ್ಪೀಡ್ ರೈಲು ಚೆನ್ನೈ ಮೈಸೂರು ಮಧ್ಯೆ 6 ಗಂಟೆ 30 ನಿಮಿಷದಲ್ಲಿ 504 ಕಿಮೀ ಸಂಚರಿಸಲಿದೆ. ಮಧ್ಯದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮಾತ್ರ ಒಂದು ಸ್ಟಾಪ್ ಇರಲಿದೆ.

ಟ್ರಯಲ್​ಗಾಗಿ ವಂದೇ ಭಾರತ್ ಎಕ್ಸಪ್ರೆಸ್ ರೈಲು ಭಾನುವಾರ ಚೆನ್ನೈ ತಲುಪಿದ ಬಳಿಕ ವಿಭಾಗೀಯ ಹೆಚ್ಚುವರಿ ರೈಲ್ವೆ ಮ್ಯಾನೇಜರ್ ಭಾನುವಾರ ವಿಡಿಯೋ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. “ಕೊನೆಗೂ ಒಳ್ಳೆಯ ಸುದ್ದಿ ಬಂತು. ಟ್ರಯಲ್ ರನ್​ಗಾಗಿ ವಂದೇ ಭಾರತ್ ಚೆನ್ನೈಗೆ ಬಂದಿದೆ” ಎಂದು ಬರೆದುಕೊಂಡಿದ್ದರು.

ಈ ರೈಲು ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ಲಭ್ಯ ಇರಲಿದೆ. ಸ್ವಯಂಚಾಲಿತ ಡೋರ್, ವೈಫೈ ಇಂಟರ್​ನೆಟ್ ಜೊತೆ ಸುಸಜ್ಜಿತ ತಂತ್ರಜ್ಞಾನದ 16 ಕೋಚ್​ಗಳನ್ನು ಇದು ಹೊಂದಿರಲಿದೆ. ನ.11 ರಂದು ಬೆಂಗಳೂರಲ್ಲಿ ಈ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago