BREAKING NEWS

ಲೋಕಸಭೆ ಭದ್ರತಾ ಲೋಪ: ಒಳನುಗ್ಗಿದ್ದ ಇಬ್ಬರಲ್ಲಿ ಓರ್ವ ಮೈಸೂರಿನವನು!

ನವದೆಹಲಿ: ನೂತನ ಸಂಸತ್ತು ಭವನದಲ್ಲಿ ಭದ್ರತಾ ಲೋಪ ಕಾಣಿಸಿಕೊಂಡಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ಸಮಯದಲ್ಲಿ ಅಪರಿಚಿತ ಇಬ್ಬರು ವ್ಯಕ್ತಿಗಳು ನುಗ್ಗಿರುವ ಘಟನೆ ನಡೆದಿದೆ.

ಇದೀಗ ಆ ಅಪರಿಚಿತ ವ್ಯಕ್ತಿಗಳು ಯಾರೆಂದು ತಿಳಿದುಬಂದಿದ್ದು, ಓರ್ವ ವ್ಯಕ್ತಿ ಮೈಸೂರಿನ ವಿಜಯನಗರದ ಮೂಲದ ಮನೋರಂಜನ್ ಎಂಬ ಇಂಜಿನಿಯರಿಂಗ್‌ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಇನ್ನೂ ಓರ್ವ ವಿದ್ಯಾರ್ಥಿಯೂ ಸಹ ಮೈಸೂರು ಮೂಲದವನು ಎನ್ನಲಾಗುತ್ತಿದೆ. ಇವರು ಯಾತಕ್ಕಾಗಿ ಈ ರೀತಿಯ ಕೃತ್ಯ ಎಸಗಿದ ಎಂಬ ವಿಷಯ ಇನ್ನೂ ಬಯಲಾಗಬೇಕಿದೆ. ಕೈನಲ್ಲಿ ಡಬ್ಬಿ ಹಿಡಿದು ಸಂಸತ್‌ ಒಳನುಗ್ಗಿದ್ದ ಈತ ಅದರಿಂದ ಹಳದಿ ಹೊಗೆಯನ್ನು ಹೊರಸೂಸಿದ್ದ. ಇನ್ನು ಮೈಸೂರು ಸಂಸದರ ಅತಿಥಿ ಎಂದು ಹೇಳಿ ಸಂಸತ್‌ ಪ್ರವೇಶಿಸಿದ್ದ ಎಂದು ತಿಳಿದುಬಂದಿದೆ. ಡಿಸೆಂಬರ್‌ 12ರಂದು ಸಂಸದ ಪ್ರತಾಪ್‌ ಸಿಂಹ ಕಚೇರಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಪಾಸ್‌ ಪಡೆದಿದ್ದರು ಎಂದು ತಿಳಿದುಬಂದಿದೆ. ಸಾಗರ್‌ ಶರ್ಮಾ ಹೆಸರಿನಲ್ಲಿ ಪಾಸ್‌ ಪಡೆದಿದ್ದರು. 

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮನೋರಂಜನ್ ತಂದೆ  ದೇವರಾಜೇಗೌಡ ಇಂತಹ ಕೃತ್ಯ ಎಸಗಿದವರು ಯಾರೇ ಆದರೂ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಅದು ತನ್ನ ಮಗನಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.

ಈ ಇಬ್ಬರು ಮಾತ್ರವಲ್ಲದೇ ಹೊರಗಡೆ ಸಹ ಇಬ್ಬರು ಅಂತಹದ್ದೇ ಹೊಗೆಯನ್ನು ಸೂಸಿ ಪ್ರತಿಭಟನೆ ನಡೆಸುತ್ತಿದ್ದರು ಹಾಗೂ ಅವರನ್ನೂ ಸಹ ಬಂಧಿಸಲಾಗಿದೆ. ಸದ್ಯ ನಾಲ್ವರು ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಅವರ ಹಿನ್ನೆಲೆಯನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆ. ಇದರ ಹಿಂದೆ ಯಾವುದಾದರೂ ಸಂಘಟನೆಗಳ ಕೈವಾಡವಿದೆಯಾ, ಯಾರ ಮೇಲಾದರೂ ವೈಯಕ್ತಿಕ ದ್ವೇಷವಿತ್ತಾ ಎಂಬ ಅನುಮಾನಗಳಿಗೆ ವಿಚಾರಣೆಯಲ್ಲಿ ಉತ್ತರ ಸಿಗಬೇಕಿದೆ. 

andolana

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

11 mins ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

32 mins ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

1 hour ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

1 hour ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

1 hour ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

2 hours ago