BREAKING NEWS

ಲೋಕಸಭೆ ಭದ್ರತಾ ಲೋಪ: ಒಳನುಗ್ಗಿದ್ದ ಇಬ್ಬರಲ್ಲಿ ಓರ್ವ ಮೈಸೂರಿನವನು!

ನವದೆಹಲಿ: ನೂತನ ಸಂಸತ್ತು ಭವನದಲ್ಲಿ ಭದ್ರತಾ ಲೋಪ ಕಾಣಿಸಿಕೊಂಡಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ಸಮಯದಲ್ಲಿ ಅಪರಿಚಿತ ಇಬ್ಬರು ವ್ಯಕ್ತಿಗಳು ನುಗ್ಗಿರುವ ಘಟನೆ ನಡೆದಿದೆ.

ಇದೀಗ ಆ ಅಪರಿಚಿತ ವ್ಯಕ್ತಿಗಳು ಯಾರೆಂದು ತಿಳಿದುಬಂದಿದ್ದು, ಓರ್ವ ವ್ಯಕ್ತಿ ಮೈಸೂರಿನ ವಿಜಯನಗರದ ಮೂಲದ ಮನೋರಂಜನ್ ಎಂಬ ಇಂಜಿನಿಯರಿಂಗ್‌ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಇನ್ನೂ ಓರ್ವ ವಿದ್ಯಾರ್ಥಿಯೂ ಸಹ ಮೈಸೂರು ಮೂಲದವನು ಎನ್ನಲಾಗುತ್ತಿದೆ. ಇವರು ಯಾತಕ್ಕಾಗಿ ಈ ರೀತಿಯ ಕೃತ್ಯ ಎಸಗಿದ ಎಂಬ ವಿಷಯ ಇನ್ನೂ ಬಯಲಾಗಬೇಕಿದೆ. ಕೈನಲ್ಲಿ ಡಬ್ಬಿ ಹಿಡಿದು ಸಂಸತ್‌ ಒಳನುಗ್ಗಿದ್ದ ಈತ ಅದರಿಂದ ಹಳದಿ ಹೊಗೆಯನ್ನು ಹೊರಸೂಸಿದ್ದ. ಇನ್ನು ಮೈಸೂರು ಸಂಸದರ ಅತಿಥಿ ಎಂದು ಹೇಳಿ ಸಂಸತ್‌ ಪ್ರವೇಶಿಸಿದ್ದ ಎಂದು ತಿಳಿದುಬಂದಿದೆ. ಡಿಸೆಂಬರ್‌ 12ರಂದು ಸಂಸದ ಪ್ರತಾಪ್‌ ಸಿಂಹ ಕಚೇರಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಪಾಸ್‌ ಪಡೆದಿದ್ದರು ಎಂದು ತಿಳಿದುಬಂದಿದೆ. ಸಾಗರ್‌ ಶರ್ಮಾ ಹೆಸರಿನಲ್ಲಿ ಪಾಸ್‌ ಪಡೆದಿದ್ದರು. 

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮನೋರಂಜನ್ ತಂದೆ  ದೇವರಾಜೇಗೌಡ ಇಂತಹ ಕೃತ್ಯ ಎಸಗಿದವರು ಯಾರೇ ಆದರೂ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಅದು ತನ್ನ ಮಗನಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.

ಈ ಇಬ್ಬರು ಮಾತ್ರವಲ್ಲದೇ ಹೊರಗಡೆ ಸಹ ಇಬ್ಬರು ಅಂತಹದ್ದೇ ಹೊಗೆಯನ್ನು ಸೂಸಿ ಪ್ರತಿಭಟನೆ ನಡೆಸುತ್ತಿದ್ದರು ಹಾಗೂ ಅವರನ್ನೂ ಸಹ ಬಂಧಿಸಲಾಗಿದೆ. ಸದ್ಯ ನಾಲ್ವರು ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಅವರ ಹಿನ್ನೆಲೆಯನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆ. ಇದರ ಹಿಂದೆ ಯಾವುದಾದರೂ ಸಂಘಟನೆಗಳ ಕೈವಾಡವಿದೆಯಾ, ಯಾರ ಮೇಲಾದರೂ ವೈಯಕ್ತಿಕ ದ್ವೇಷವಿತ್ತಾ ಎಂಬ ಅನುಮಾನಗಳಿಗೆ ವಿಚಾರಣೆಯಲ್ಲಿ ಉತ್ತರ ಸಿಗಬೇಕಿದೆ. 

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

9 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago