ಬೆಂಗಳೂರು: ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರವು ‘ನಾಡದೇವತೆ ಭುವನೇಶ್ವರಿ ಭವನ’ ಎಂಬ ಬೃಹತ್ ಸಭಾಂಗಣವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಅವರು ನಿನ್ನೆ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನದಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಪರೋಪಕಾರಿ ಚಾರ್ಮಾಡಿ ಹಸನಬ್ಬ ಸೇರಿದಂತೆ 68 ಸಾಧಕರಿಗೆ ಹಾಗೂ 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ವಿತರಿಸಿ ಮಾತನಾಡಿದರು. ಕನ್ನಡ ಭಾಷೆ ಮಾತನಾಡುವ ಅನಿವಾರ್ಯ ವಾತಾವರಣ ನಿರ್ಮಾಣ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ ಎಂದರು.
ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ಕಳೆದರೂ ಅದನ್ನು ಆಚರಿಸದೇ ಇರುವುದು ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯತನ ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ ಅವರು, ಇದು ಬಿಜೆಪಿ ಮಾಡಿದ ಲೋಪ ಎಂದರು.
ನಾವು ‘ಕರ್ನಾಟಕ ಸಂಭ್ರಮ 50’ ನ್ನು ಘೋಷಿಸಿದ್ದೇವೆ, ಇದು ರಾಜ್ಯವನ್ನು ಕರ್ನಾಟಕ ಎಂದು ಮರು ನಾಮಕರಣಗೊಳಿಸಿ 50 ವರ್ಷಗಳು ಸಂದ ಸಂದರ್ಭದಲ್ಲಿ ಆಚರಿಸುವ ಒಂದು ವರ್ಷದ ಕಾರ್ಯಕ್ರಮವಾಗಿದೆ. ರಾಜ್ಯದ ಇತಿಹಾಸ, ಅದರ ವೈಭವ, ಭಾಷೆ, ಸಂಸ್ಕೃತಿ ಮತ್ತು ಪರಂಪರೆಗೆ ಸಂಬಂಧಿಸಿದ ಕಾರ್ಯಕ್ರಮಗಳು ನಾಳೆಯಿಂದ ಒಂದು ವರ್ಷ ರಾಜ್ಯಾದ್ಯಂತ ನಡೆಯಲಿದೆ ಎಂದರು.
ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡುವ ಸಮಿತಿಗೆ 2,655 ಅರ್ಜಿಗಳು ಬಂದಿದ್ದು, ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿದ್ದಕ್ಕಾಗಿ ಶ್ಲಾಘಿಸಿದರು. ಅಧಿಕಾರದಲ್ಲಿರುವವರ ಅಭಿಲಾಷೆಗಳಿಗೆ ಅನುಗುಣವಾಗಿ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಸೇರಿಸುವ ನಿದರ್ಶನಗಳಿವೆ. ಆದರೆ ನಾವು ಆ ಅಭ್ಯಾಸಗಳನ್ನು ದೂರವಿಟ್ಟಿದ್ದೇವೆ ಎಂದ ಮುಖ್ಯಮಂತ್ರಿಗಳು ಶಾಲಾ ಪಠ್ಯಕ್ರಮದ ಭಾಗವಾಗಿ ‘ವಚನ’ಗಳನ್ನು ಪರಿಚಯಿಸುವಂತೆ ನಿಜಗುಣಾನಂದ ಸ್ವಾಮಿಗಳ ಸಲಹೆಗೆ ಉತ್ತರಿಸಿದ ಅವರು, ಸರ್ಕಾರ ಅದನ್ನು ಪರಿಗಣಿಸುತ್ತದೆ ಎಂದು ಹೇಳಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…