BREAKING NEWS

ನಾಡಹಬ್ಬ ದಸರಾವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ದಸರಾ ಹಬ್ಬವನ್ನು ದಿನಾಂಕ 15.10.2023 ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.

ವಿಶಿಷ್ಟ ದೀಪಾಲಂಕಾರ : ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ : ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸೂಚಿಸಿದರು.

ವಸ್ತು ಪ್ರದರ್ಶನ : ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು ಸೂಚಿಸಿದರು.

ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ : ಎಲ್ಲಾ ಪ್ರಕಾರಗಳಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಯಿತು.

ಪ್ರವಾಸೋದ್ಯಮಕ್ಕೆ ಒತ್ತು: ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕೆಂದು ತಿಳಿಸಿದರು. ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ.

ಏರ್ ಶೋ : ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

· ಶ್ರೀ ರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು.

· ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.

· ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು

· ದಸರಾದಲ್ಲಿ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಬೇಕು ಎಂದು ತೀರ್ಮಾನಿಸಲಾಯಿತು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಹೆಚ್.ಕೆ.ಪಾಟೀಲ್, ಭೈರತಿ ಸುರೇಶ್,ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ: ರಾಜೇಂದ್ರ ಕೆ.ವಿ ಮೊದಲಾದವರು ಉಪಸ್ಥಿತರಿದ್ದರು.

andolanait

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

9 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

10 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

10 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

11 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

11 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

11 hours ago