BREAKING NEWS

ನಾಡಹಬ್ಬ ದಸರಾವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ದಸರಾ ಹಬ್ಬವನ್ನು ದಿನಾಂಕ 15.10.2023 ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.

ವಿಶಿಷ್ಟ ದೀಪಾಲಂಕಾರ : ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ : ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸೂಚಿಸಿದರು.

ವಸ್ತು ಪ್ರದರ್ಶನ : ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು ಸೂಚಿಸಿದರು.

ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ : ಎಲ್ಲಾ ಪ್ರಕಾರಗಳಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಯಿತು.

ಪ್ರವಾಸೋದ್ಯಮಕ್ಕೆ ಒತ್ತು: ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕೆಂದು ತಿಳಿಸಿದರು. ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ.

ಏರ್ ಶೋ : ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

· ಶ್ರೀ ರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು.

· ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.

· ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು

· ದಸರಾದಲ್ಲಿ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಬೇಕು ಎಂದು ತೀರ್ಮಾನಿಸಲಾಯಿತು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಹೆಚ್.ಕೆ.ಪಾಟೀಲ್, ಭೈರತಿ ಸುರೇಶ್,ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ: ರಾಜೇಂದ್ರ ಕೆ.ವಿ ಮೊದಲಾದವರು ಉಪಸ್ಥಿತರಿದ್ದರು.

andolanait

Recent Posts

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

40 mins ago

ಅಮೇರಿಕಾ-ಇರಾನ್‌ ಸಂಧಾನ: ಪಾಕ್‌ನಲ್ಲೇ 2ನೇ ಸುತ್ತಿನ ಮಾತುಕತೆ

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

54 mins ago

2 ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು…

1 hour ago

ಹನೂರು ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರ ಶ್ರೀರೂಪ ಭೇಟಿ: ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ,…

1 hour ago

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…

2 hours ago

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

2 hours ago