BREAKING NEWS

ನಳಿನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ : ರಾಜ್ಯ ಬಿಜೆಪಿ ಸ್ಪಷ್ಟನೆ

ಬಳ್ಳಾರಿ : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಅವರು ಇದೀಗ ತಾವು ರಾಜಿನಾಮೆ ನೀಡಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಬಳ್ಳಾರಿಯಲ್ಲಿ ರಾಜಿನಾಮೆ ನೀಡಿದ್ದೇನೆ.. ಮೌಖಿಕವಾಗಿಯೂ ಹೇಳಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಇದೀಗ ಮಾಧ್ಯಮ ಪ್ರಕಟಣೆ ನೀಡಿ ಅಲ್ಲಿ ತಾವು ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಮಾಧ್ಯಮಗಳ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಏನಿದು ಗೊಂದಲ? : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡರೂ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಾಜಿನಾಮೆ ಸಲ್ಲಿಸಿರಲಿಲ್ಲ. ಈಗ ಹೊಸಬರ ನೇಮಕ ಖಚಿತವಾಗುತ್ತೆ, ಇವರನ್ನು ಕಿತ್ತು ಹಾಕುತ್ತಾರೆ ಎನ್ನುವಾಗ ರಾಜಿನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಡಿದೆ. ಇದಕ್ಕೆ ಇಂಬು ನೀಡುವಂತೆ ಸ್ವತಃ ನಳೀನ್ ಕುಮಾರ್ ಕಟೀಲ್ ಅವರೇ ಬಳ್ಳಾರಿಯ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಾಜಿನಾಮೆ ನೀಡಿದ್ದೇನೆ.. ಮೌಖಿಕವಾಗಿಯೂ ಹೇಳಿದ್ದೇನೆ ಎಂದು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು.

ಈ ಕುರಿತ ಸುದ್ದಿಗಳು ವ್ಯಾಪಕವಾದಂತೆಯೇ ಈ ಬಗ್ಗೆ ರಾಜ್ಯ ಬಿಜೆಪಿ ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಸ್ಪಷ್ಟನೆ ನೀಡಿದೆ. ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದು, ‘ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಈ ಕುರಿತ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಕಟೀಲ್ ತಿಳಿಸಿದ್ದಾರೆ. ಸೋಮಣ್ಣ ರಾಜ್ಯಾಧ್ಯಕ್ಷ ಆಕಾಂಕ್ಷೆ ಪ್ರಕಟಿಸಿದ ಕುರಿತು ಕೇಳಿದ ಪ್ರಶ್ನೆಗೆ ಅವರು ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕುರಿತು ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದರು.

ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಪಕ್ಷವು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡಲಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜಿನಾಮೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕಟೀಲ್ ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

lokesh

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

2 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

2 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

2 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

2 hours ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

2 hours ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

2 hours ago