ಬೆಂಗಳೂರು: ರಾಗಿ-ಭತ್ತದ ತಳಿಗೆ ರೈತ ಹೋರಾಟಗಾರ ದಿ. ಜಿ. ಮಾದೇಗೌಡರ ಹೆಸರಿಡಲು ಕ್ರಮ ವಹಿಸುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆದೇಶ ನೀಡಿದ್ದಾರೆ.
ಡಾ. ಜಿ.ಮಾದೇಗೌಡ ಪ್ರತಿಷ್ಠಾನದ 23ನೇ ವರ್ಷದ ಸಮಾಜಸೇವಾ ಮತ್ತು ಸಾವಯವ ಕೃಷಿ ಪ್ರಶಸ್ತಿ ಸಮಾರಂಭದಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರು ಈ ಕುರಿತು ಕೃಷಿ ಸಚಿವರ ಗಮನಕ್ಕೆ ತಂದಿದ್ದರು. ಮಾದೇಗೌಡರು 60 ವರ್ಷಗಳ ಕಾಲ ಶೈಕ್ಷಣಿಕವಾಗಿ, ರಾಜಕೀಯವಾಗಿ ಹತ್ತು ಹಲವು ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹೆಸರು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿ ಉಳಿಯಲು ಭತ್ತ ಅಥವಾ ರಾಗಿ ತಳಿಗೆ ಅವರ ಹೆಸರನ್ನು ಇಡಬೇಕು ಎಂದು ಮನವಿ ಮಾಡಿದ್ದರು.
ಶಾಸಕರ ಮನವಿಗೆ ವೇದಿಕೆಯಲ್ಲಿಯೇ ಸ್ಪಂದಿಸಿದ ಕೃಷಿ ಸಚಿವರು, ರಾಗಿ ಅಥವಾ ಭತ್ತದ ತಳಿಗೆ ಜಿ.ಮಾದೇಗೌಡರ ಹೆಸರಿಡುವ ಬಗ್ಗೆ ಕ್ರಮ ವಹಿಸುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…