BREAKING NEWS

ರಾಗಿ-ಭತ್ತದ ತಳಿಗೆ ಜಿ.ಮಾದೇಗೌಡರ ಹೆಸರು: ಸಚಿವ ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ರಾಗಿ-ಭತ್ತದ ತಳಿಗೆ ರೈತ ಹೋರಾಟಗಾರ ದಿ. ಜಿ. ಮಾದೇಗೌಡರ ಹೆಸರಿಡಲು ಕ್ರಮ ವಹಿಸುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆದೇಶ ನೀಡಿದ್ದಾರೆ.

ಡಾ. ಜಿ.ಮಾದೇಗೌಡ ಪ್ರತಿಷ್ಠಾನದ 23ನೇ ವರ್ಷದ ಸಮಾಜಸೇವಾ ಮತ್ತು ಸಾವಯವ ಕೃಷಿ ಪ್ರಶಸ್ತಿ ಸಮಾರಂಭದಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರು ಈ ಕುರಿತು ಕೃಷಿ ಸಚಿವರ ಗಮನಕ್ಕೆ ತಂದಿದ್ದರು. ಮಾದೇಗೌಡರು 60 ವರ್ಷಗಳ ಕಾಲ ಶೈಕ್ಷಣಿಕವಾಗಿ, ರಾಜಕೀಯವಾಗಿ ಹತ್ತು ಹಲವು ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹೆಸರು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿ ಉಳಿಯಲು ಭತ್ತ ಅಥವಾ ರಾಗಿ ತಳಿಗೆ ಅವರ ಹೆಸರನ್ನು ಇಡಬೇಕು ಎಂದು ಮನವಿ ಮಾಡಿದ್ದರು.

ಶಾಸಕರ ಮನವಿಗೆ ವೇದಿಕೆಯಲ್ಲಿಯೇ ಸ್ಪಂದಿಸಿದ ಕೃಷಿ ಸಚಿವರು, ರಾಗಿ ಅಥವಾ ಭತ್ತದ ತಳಿಗೆ ಜಿ.ಮಾದೇಗೌಡರ ಹೆಸರಿಡುವ ಬಗ್ಗೆ ಕ್ರಮ ವಹಿಸುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

 

andolanait

Recent Posts

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

4 mins ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

51 mins ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

1 hour ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

1 hour ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

2 hours ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

2 hours ago