ಬೆಂಗಳೂರು: ರಾಗಿ-ಭತ್ತದ ತಳಿಗೆ ರೈತ ಹೋರಾಟಗಾರ ದಿ. ಜಿ. ಮಾದೇಗೌಡರ ಹೆಸರಿಡಲು ಕ್ರಮ ವಹಿಸುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆದೇಶ ನೀಡಿದ್ದಾರೆ.
ಡಾ. ಜಿ.ಮಾದೇಗೌಡ ಪ್ರತಿಷ್ಠಾನದ 23ನೇ ವರ್ಷದ ಸಮಾಜಸೇವಾ ಮತ್ತು ಸಾವಯವ ಕೃಷಿ ಪ್ರಶಸ್ತಿ ಸಮಾರಂಭದಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರು ಈ ಕುರಿತು ಕೃಷಿ ಸಚಿವರ ಗಮನಕ್ಕೆ ತಂದಿದ್ದರು. ಮಾದೇಗೌಡರು 60 ವರ್ಷಗಳ ಕಾಲ ಶೈಕ್ಷಣಿಕವಾಗಿ, ರಾಜಕೀಯವಾಗಿ ಹತ್ತು ಹಲವು ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹೆಸರು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿ ಉಳಿಯಲು ಭತ್ತ ಅಥವಾ ರಾಗಿ ತಳಿಗೆ ಅವರ ಹೆಸರನ್ನು ಇಡಬೇಕು ಎಂದು ಮನವಿ ಮಾಡಿದ್ದರು.
ಶಾಸಕರ ಮನವಿಗೆ ವೇದಿಕೆಯಲ್ಲಿಯೇ ಸ್ಪಂದಿಸಿದ ಕೃಷಿ ಸಚಿವರು, ರಾಗಿ ಅಥವಾ ಭತ್ತದ ತಳಿಗೆ ಜಿ.ಮಾದೇಗೌಡರ ಹೆಸರಿಡುವ ಬಗ್ಗೆ ಕ್ರಮ ವಹಿಸುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…