Mysore
26
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಹೆಸರಿಡಿ: ಯತ್ನಾಳ್‌

ಬೆಳಗಾವಿ: ಮೈಸೂರಿನ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು.

ಅವರ ಕೊಡುಗೆ ಕರ್ನಾಟಕ ಹಾಗು ಭಾರತಕ್ಕೆ ಅಪಾರವಾದದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಕಾಂಗ್ರೆಸ್ ನಾಯಕರ ಪ್ರಸ್ತಾವಕ್ಕೆ ಬಿಜೆಪಿಗೆ ತೀವ್ರವಾಗಿ ವಿರೋಧಿಸಿದೆ. ಅಲ್ಲದೇ ಟಿಪ್ಪು ಸುಲ್ತಾನ್ ಹೆಸರನ್ನು ವಿಮಾನ ನಿಲ್ದಾಣಕ್ಕೆ ಅಲ್ಲ ಶೌಚಾಲಯಕ್ಕೆ ಇಡಿ ಎಂದು ಯತ್ನಾಳ್ ನಿನ್ನೆ ವಾಗ್ಧಾಳಿ ನಡೆಸಿದ್ದರು.

ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು. ಅವರ ಕೊಡುಗೆ ಕರ್ನಾಟಕ ಹಾಗು ಭಾರತಕ್ಕೆ ಅಪಾರವಾದದ್ದು ಎಂದು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!