BREAKING NEWS

ಮೋದಿ ತೆಲಂಗಾಣಕ್ಕಿಂತ ಹೆಚ್ಚು ಅಭಿವೃದ್ಧಿ ಸಾಧಿಸಿರುವ ರಾಜ್ಯದ ಹೆಸರೇಳಿ: ಕೆಟಿಆರ್

ಹೈದರಾಬಾದ್‌: ತೆಲಂಗಾಣ ರಾಜ್ಯವು ಇತರೆ ರಾಜ್ಯಗಳಿಗಿಂತ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಣ್ಣತನದ ರಾಜಕಾರಣದಿಂದಾಗಿ ರಾಜ್ಯದ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಆರ್‌ಎಸ್‌ ನಾಯಕ ಮತ್ತು ರಾಜ್ಯ ಸಚಿವ ಕೆ.ಟಿ ರಾಮರಾವ್ ಭಾನುವಾರ ಆರೋಪಿಸಿದ್ದಾರೆ.

ಸಿಕಂದರಾಬಾದ್‌ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೋದಿ, ತೆಲಂಗಾಣದಲ್ಲಿ ಅನುಷ್ಠಾನಗೊಳಿಸುವ ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ ಅಡ್ಡಗಾಲು ಹಾಕುತ್ತಿದೆ ಎಂದು ಟೀಕಾಪ್ರಹಾರ ಮಾಡಿದ್ದರು. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ಸೂಕ್ತ ಸಹಕಾರ ನೀಡುತ್ತಿಲ್ಲ. ಇದು ತೆಲಂಗಾಣ ಜನರ ಕನಸುಗಳ ಮೇಲೆ ಪರಿಣಾಮ ಉಂಟುಮಾಡುತ್ತಿದೆ. ಇದರಿಂದ ತಾವು ನೊಂದಿರುವುದಾಗಿ ಹೇಳಿಕೊಂಡಿದ್ದರು.

‘ತೆಲಂಗಾಣದ ಜನರಿಗಾಗಿ ರೂಪಿಸಿರುವ ಅಭಿವೃದ್ಧಿ ಯೋಜನೆಗಳಿಗೆ ತೊಡಕಾಗುವುದಕ್ಕೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಡಬಾರದು ಎಂದು ಮನವಿ ಮಾಡುತ್ತೇನೆ’ ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ರಾಮರಾವ್, ‘ವಿವಿಧ ಕ್ಷೇತ್ರಗಳಲ್ಲಿ ತೆಲಂಗಾಣ ರಾಜ್ಯ ಮಾಡಿರುವ ಸಾಧನೆಗಳ ಪಟ್ಟಿಯನ್ನು ಟ್ಟೀಟ್‌ ಮಾಡುವ ಮೂಲಕ ಕಳೆದ ಒಂಭತ್ತು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ತೆಲಂಗಾಣಕ್ಕಿಂತ ಉತ್ತಮವಾಗಿ ಸಾಧನೆ ಮಾಡಿರುವ ರಾಜ್ಯವನ್ನು ಮೋದಿ ಹೇಳಲಿ’ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಎಲ್ಲಾ ಮನೆಗಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗಿದೆ. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ತೆಲಂಗಾಣವು ಭಾರತದಲ್ಲಿ ಅತಿ ಹೆಚ್ಚು ಭತ್ತ ಬೆಳೆಯುವ ಎರಡನೇ ರಾಜ್ಯವಾಗಿದೆ. ಮಾಹಿತಿ ತಂತ್ರಜ್ಞಾನದಲ್ಲಿ ಅತಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುತ್ತಿದೆ ಹಾಗೂ ಹಲವಾರು ಅಂತರರಾಷ್ಟ್ರೀಯ ಪುರಸ್ಕಾರಗಳನ್ನು ಪಡೆದುಕೊಂಡಿದೆ. ಇಷ್ಟೆಲ್ಲಾ ಸಾಧನೆಗಳನ್ನು ಮಾಡಿದ್ದರು ಕೂಡ ಪ್ರಧಾನಿ ಮೋದಿ ಅವರು ಮೆಚ್ಚುಗೆಯ ಒಂದು ಮಾತನ್ನು ಸಹ ಹೇಳಲಿಲ್ಲ. ತಮ್ಮ ಕ್ಷುಲಕ ರಾಜಕೀಯಕ್ಕಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ರಾಜ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿದ್ದಾರೆ ಎಂದು ರಾಮರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನರೇಂದ್ರ ಮೋದಿಯವರೇ ನಾನು ನಿಮಗೆ ಸವಾಲು ಹಾಕುತ್ತಿದ್ದೇನೆ. ಕಳೆದ ಒಂಭತ್ತು ವರ್ಷಗಳಲ್ಲಿ ತೆಲಂಗಾಣ ರಾಜ್ಯಕ್ಕಿಂತ ಹೆಚ್ಚು ಅಭಿವೃದ್ಧಿ ಸಾಧಿಸಿರುವ ರಾಜ್ಯದ ಹೆಸರು ಹೇಳಿ?’ ಎಂದು ರಾಮರಾವ್ ಪ್ರಶ್ನಿಸಿದ್ದಾರೆ.

andolanait

Recent Posts

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

4 mins ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

21 mins ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

5 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

5 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

6 hours ago