BREAKING NEWS

ಮೈಸೂರು ಮೃಗಾಲಯದಲ್ಲಿ ಸಿಂಹದ ಮರಿಗಳಿಗೆ ನಾಮಕರಣ

ಮೈಸೂರು: ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಇಂದು ಎರಡು ಗಂಡು ಸಿಂಹದ ಮರಿಗಳು ಮತ್ತು ಒಂದು ಹೆಣ್ಣು ಸಿಂಹದ ಮರಿಗೆ ಅನುಕ್ರಮವಾಗಿ ಸೂರ್ಯ, ಚಂದ್ರ ಮತ್ತು ಕಬಿನಿ ಎಂಬ ಹೆಸರನ್ನಿಡಲಾಯಿತು.

ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಸಂದರ್ಭದಲ್ಲಿ ಹಾಜರಿದು, ಮೃಗಾಲಯದಲ್ಲಿರುವ ರಾಜ ಮತ್ತು ನಿರ್ಭಯ ಸಿಂಹದ ಮರಿಗಳ ಹೆಸರಿನ ಫಲಕ ಅನಾವರಣ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಮೃಗಾಲಯವನ್ನು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯುತ್ತಮವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಇದು ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿ ನಿಲ್ಲುವಂತೆ ಅಭಿವೃದ್ಧಿ ಸಾಸಬೇಕು ಎಂಬುದು ತಮ್ಮ ಇಂಗಿತವಾಗಿದೆ ಎಂದರು.

ಮೃಗಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಅದರಲ್ಲೂ ಮಕ್ಕಳು ಆಗಮಿಸುತ್ತಿದ್ದು ಅವರಿಗೆ ಪ್ರಾಣಿ-ಸಸ್ಯ ಸಂಕುಲದ ಬಗ್ಗೆ ಹಾಗೂ ವನ್ಯಮೃಗಗಳ ಬಗ್ಗೆ ಮಾಹಿತಿ ತಿಳಿಯಲು ಸಹಕಾರಿಯಾಗಿದೆ ಮನರಂಜನೆಯೂ ಲಭಿಸುತ್ತದೆ ಎಂದು ಹೇಳಿದರು. ಈ ಬಾರಿಯ ಮೈಸೂರು ದಸರಾ ಜಂಬೂಸ ಅವರಿಗೆ ಬರುವ ಆನೆಗಳ ಕುರಿತಂತೆ ಇಂದು ನಡೆಯಲಿರುವ ಸಭೆಯಲ್ಲಿ ಚರ್ಚಿಸುವುದಾಗಿಯೂ ಖಂಡ್ರೆ ತಿಳಿಸಿದರು.

andolanait

Recent Posts

ಶೀಘ್ರದಲ್ಲಿಯೇ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಿಮೋಥೆರಪಿ ಆರಂಭ

ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ; ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಮಡಿಕೇರಿ: ಕೊಡಗಿನಲ್ಲಿ ಡೇಕೇರ್ ಕಿಮೊಥೆರಪಿ ಕೇಂದ್ರ…

4 mins ago

ಚಾ.ನಗರ ಜಿಲ್ಲೆಯಲ್ಲಿ ಹುರುಳಿ ಬೆಳೆ ‘ಇಳಿ’ವರಿ!

ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು  ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ…

37 mins ago

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

5 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

5 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

5 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

5 hours ago