ಮೈಸೂರು: ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಇಂದು ಎರಡು ಗಂಡು ಸಿಂಹದ ಮರಿಗಳು ಮತ್ತು ಒಂದು ಹೆಣ್ಣು ಸಿಂಹದ ಮರಿಗೆ ಅನುಕ್ರಮವಾಗಿ ಸೂರ್ಯ, ಚಂದ್ರ ಮತ್ತು ಕಬಿನಿ ಎಂಬ ಹೆಸರನ್ನಿಡಲಾಯಿತು.
ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಸಂದರ್ಭದಲ್ಲಿ ಹಾಜರಿದು, ಮೃಗಾಲಯದಲ್ಲಿರುವ ರಾಜ ಮತ್ತು ನಿರ್ಭಯ ಸಿಂಹದ ಮರಿಗಳ ಹೆಸರಿನ ಫಲಕ ಅನಾವರಣ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಮೃಗಾಲಯವನ್ನು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯುತ್ತಮವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಇದು ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿ ನಿಲ್ಲುವಂತೆ ಅಭಿವೃದ್ಧಿ ಸಾಸಬೇಕು ಎಂಬುದು ತಮ್ಮ ಇಂಗಿತವಾಗಿದೆ ಎಂದರು.
ಮೃಗಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಅದರಲ್ಲೂ ಮಕ್ಕಳು ಆಗಮಿಸುತ್ತಿದ್ದು ಅವರಿಗೆ ಪ್ರಾಣಿ-ಸಸ್ಯ ಸಂಕುಲದ ಬಗ್ಗೆ ಹಾಗೂ ವನ್ಯಮೃಗಗಳ ಬಗ್ಗೆ ಮಾಹಿತಿ ತಿಳಿಯಲು ಸಹಕಾರಿಯಾಗಿದೆ ಮನರಂಜನೆಯೂ ಲಭಿಸುತ್ತದೆ ಎಂದು ಹೇಳಿದರು. ಈ ಬಾರಿಯ ಮೈಸೂರು ದಸರಾ ಜಂಬೂಸ ಅವರಿಗೆ ಬರುವ ಆನೆಗಳ ಕುರಿತಂತೆ ಇಂದು ನಡೆಯಲಿರುವ ಸಭೆಯಲ್ಲಿ ಚರ್ಚಿಸುವುದಾಗಿಯೂ ಖಂಡ್ರೆ ತಿಳಿಸಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…