BREAKING NEWS

ಎಫ್​ಎಂಸಿಜಿ ಬ್ರ್ಯಾಂಡ್ ರ‍್ಯಾಂಕಿಂಗ್​ನಲ್ಲಿ ಮೇಲೇರಿದ ನಂದಿನಿ: ಒಂದು ಸ್ಥಾನ ಕುಸಿದ ಅಮುಲ್

ಬೆಂಗಳೂರು : ಫಾಸ್ಟ್ ಮೂವಿಂಗ್ ಕನ್​ಸ್ಯೂಮರ್ ಗೂಡ್ಸ್ ಬ್ರ್ಯಾಂಡ್ ರ‍್ಯಾಂಕಿಂಗ್​ನಲ್ಲಿ 2023ನೇ ಸಾಲಿನಲ್ಲಿ ಕರ್ನಾಟಕ ಸಹಕಾರಿ ಹಾಲು ಮಾರಾಟ ಮಹಾಮಂಡಳದ ಡೈರಿ ಬ್ರ್ಯಾಂಡ್ ನಂದಿನಿ ಒಂದು ಸ್ಥಾನ ಮೇಲಕ್ಕೇರಿದೆ. 2022ರಲ್ಲಿ 7ನೇ ಸ್ಥಾನದಲ್ಲಿದ್ದ ನಂದಿನಿ ಬ್ರ್ಯಾಂಡ್ 2023ರಲ್ಲಿ ಒಂದು ಸ್ಥಾನ ಮೇಲೇರಿ 6ರಲ್ಲಿ ಗುರುತಿಸಿಕೊಂಡಿದೆ. ಮತ್ತೊಂದೆಡೆ, 2022 ರಲ್ಲಿ 2ನೇ ಸ್ಥಾನದಲ್ಲಿದ್ದ ಗುಜರಾತ್​​ನ ಅಮುಲ್ 3 ನೇ ಸ್ಥಾನಕ್ಕೆ ಕುಸಿದಿದೆ.

ಬ್ರ್ಯಾಂಡ್ ಫುಟ್‌ಪ್ರಿಂಟ್ ಎಂಬ ಬ್ರ್ಯಾಂಡ್ ರ‍್ಯಾಂಕಿಂಗ್ ಪಟ್ಟಿಯನ್ನು ಲಂಡನ್ ಮೂಲದ ಮಾರುಕಟ್ಟೆ ಸಂಶೋಧನಾ ಗುಂಪಿನ ಕಾಂತಾರ್ ವರ್ಲ್ಡ್‌ಪ್ಯಾನೆಲ್ ಪ್ರಕಟಿಸಿದೆ.

ನಂದಿನಿ vs ಅಮುಲ್‌

2023 ರ ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಗುಜರಾತ್​ನ ಅಮುಲ್ ಬ್ರ್ಯಾಂಡ್​​ನ ಹಾಲು ರಾಜ್ಯದ ಮಾರುಕಟ್ಟೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದೆ ಎಂಬ ವಿಚಾರ ಭಾರಿ ಗದ್ದಲಕ್ಕೆ ಕಾರಣವಾಗಿತ್ತು. ಅಮುಲ್ ವಿರುದ್ಧ ಭಾರಿ ಪ್ರತಿಭಟನೆಗಳೂ ನಡೆದಿದ್ದವು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಈ ಬ್ರ್ಯಾಂಡ್ ರ‍್ಯಾಂಕಿಂಗ್ ಕೆಎಂಎಫ್​ಗೆ ನಿರಾಳತೆ ಒದಗಿಸಲಿದೆ ಎನ್ನಲಾಗಿದೆ.

ಈ ಮಧ್ಯೆ, ಕರ್ನಾಟಕದ ಹೈನುಗಾರರಿಗೆ ಅವರ ಶ್ರಮಕ್ಕೆ ಉತ್ತಮ ಆದಾಯ ಖಾತರಿಪಡಿಸಿಕೊಳ್ಳುವ ದೃಷ್ಟಿಯಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಆಗಸ್ಟ್ 1 ರಿಂದ ಕೆಎಂಎಫ್ ಮಾರಾಟ ಮಾಡುವ ಹಾಲಿನ ಬೆಲೆಯನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ನಿರ್ಧರಿಸಿದೆ.
andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

8 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

10 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

12 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

12 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

14 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

15 hours ago