BREAKING NEWS

ಎಫ್​ಎಂಸಿಜಿ ಬ್ರ್ಯಾಂಡ್ ರ‍್ಯಾಂಕಿಂಗ್​ನಲ್ಲಿ ಮೇಲೇರಿದ ನಂದಿನಿ: ಒಂದು ಸ್ಥಾನ ಕುಸಿದ ಅಮುಲ್

ಬೆಂಗಳೂರು : ಫಾಸ್ಟ್ ಮೂವಿಂಗ್ ಕನ್​ಸ್ಯೂಮರ್ ಗೂಡ್ಸ್ ಬ್ರ್ಯಾಂಡ್ ರ‍್ಯಾಂಕಿಂಗ್​ನಲ್ಲಿ 2023ನೇ ಸಾಲಿನಲ್ಲಿ ಕರ್ನಾಟಕ ಸಹಕಾರಿ ಹಾಲು ಮಾರಾಟ ಮಹಾಮಂಡಳದ ಡೈರಿ ಬ್ರ್ಯಾಂಡ್ ನಂದಿನಿ ಒಂದು ಸ್ಥಾನ ಮೇಲಕ್ಕೇರಿದೆ. 2022ರಲ್ಲಿ 7ನೇ ಸ್ಥಾನದಲ್ಲಿದ್ದ ನಂದಿನಿ ಬ್ರ್ಯಾಂಡ್ 2023ರಲ್ಲಿ ಒಂದು ಸ್ಥಾನ ಮೇಲೇರಿ 6ರಲ್ಲಿ ಗುರುತಿಸಿಕೊಂಡಿದೆ. ಮತ್ತೊಂದೆಡೆ, 2022 ರಲ್ಲಿ 2ನೇ ಸ್ಥಾನದಲ್ಲಿದ್ದ ಗುಜರಾತ್​​ನ ಅಮುಲ್ 3 ನೇ ಸ್ಥಾನಕ್ಕೆ ಕುಸಿದಿದೆ.

ಬ್ರ್ಯಾಂಡ್ ಫುಟ್‌ಪ್ರಿಂಟ್ ಎಂಬ ಬ್ರ್ಯಾಂಡ್ ರ‍್ಯಾಂಕಿಂಗ್ ಪಟ್ಟಿಯನ್ನು ಲಂಡನ್ ಮೂಲದ ಮಾರುಕಟ್ಟೆ ಸಂಶೋಧನಾ ಗುಂಪಿನ ಕಾಂತಾರ್ ವರ್ಲ್ಡ್‌ಪ್ಯಾನೆಲ್ ಪ್ರಕಟಿಸಿದೆ.

ನಂದಿನಿ vs ಅಮುಲ್‌

2023 ರ ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಗುಜರಾತ್​ನ ಅಮುಲ್ ಬ್ರ್ಯಾಂಡ್​​ನ ಹಾಲು ರಾಜ್ಯದ ಮಾರುಕಟ್ಟೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದೆ ಎಂಬ ವಿಚಾರ ಭಾರಿ ಗದ್ದಲಕ್ಕೆ ಕಾರಣವಾಗಿತ್ತು. ಅಮುಲ್ ವಿರುದ್ಧ ಭಾರಿ ಪ್ರತಿಭಟನೆಗಳೂ ನಡೆದಿದ್ದವು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಈ ಬ್ರ್ಯಾಂಡ್ ರ‍್ಯಾಂಕಿಂಗ್ ಕೆಎಂಎಫ್​ಗೆ ನಿರಾಳತೆ ಒದಗಿಸಲಿದೆ ಎನ್ನಲಾಗಿದೆ.

ಈ ಮಧ್ಯೆ, ಕರ್ನಾಟಕದ ಹೈನುಗಾರರಿಗೆ ಅವರ ಶ್ರಮಕ್ಕೆ ಉತ್ತಮ ಆದಾಯ ಖಾತರಿಪಡಿಸಿಕೊಳ್ಳುವ ದೃಷ್ಟಿಯಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಆಗಸ್ಟ್ 1 ರಿಂದ ಕೆಎಂಎಫ್ ಮಾರಾಟ ಮಾಡುವ ಹಾಲಿನ ಬೆಲೆಯನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ನಿರ್ಧರಿಸಿದೆ.
andolanait

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

49 mins ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

2 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

3 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

7 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

8 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

14 hours ago