BREAKING NEWS

ಕೇರಳಕ್ಕೆ ನಂದಿನಿ : ಮಿಲ್ಮಾ ವಿರೋಧ

ತಿರುವನಂತಪುರ : ಗುಜರಾತ್‌ನ ‘ಅಮುಲ್’ ಉತ್ಪನ್ನಗಳ ಮಾರಾಟ– ಪ್ರಚಾರಕ್ಕೆ ಕರ್ನಾಟಕದಲ್ಲಿ ತೀವ್ರ ಪ್ರತಿರೋಧ ಎದುರಾಗಿರುವ ನಡುವೆ, ನಂದಿನಿ ಬ್ರಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಕೇರಳದಲ್ಲಿ ಮಳಿಗೆಗಳನ್ನು ತೆರೆಯುತ್ತಿರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ಧಾರಕ್ಕೆ ಮಿಲ್ಮಾ ಬ್ರಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸುವ ಕೇರಳ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ (ಕೆಎಂಎಂಎಫ್‌) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮಿಲ್ಮಾ ಅಧ್ಯಕ್ಷ ಕೆ.ಎಸ್. ಮಣಿ ಅವರು, ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟದ ಅಮುಲ್ ಉತ್ಪನ್ನಗಳು ಕರ್ನಾಟಕ ಪ್ರವೇಶಿಸುವುದಕ್ಕೆ ಆಕ್ಷೇಪಿಸುವ ಕೆಎಂಎಫ್‌, ಇದೇ ಸಮಯದಲ್ಲಿ ಕೇರಳದಲ್ಲಿ ನಂದಿನಿ ಮಳಿಗೆಗಳನ್ನು ತೆರೆಯುತ್ತಿರುವ ನಿಲುವನ್ನು ಪ್ರಶ್ನಿಸಿದ್ದಾರೆ.

ಕಳೆದ ಕೆಲವು ತಿಂಗಳಿಂದ ಕೇರಳದ ಮಲಪ್ಪುರಂನ ಮಂಜೇರಿಯಲ್ಲಿ ಮತ್ತು ಕೊಚ್ಚಿಯ ವೈಟ್ಟಿಲ್ಲಾದಲ್ಲಿ ನಂದಿನಿಯ ಎರಡು ಮಳಿಗೆಗಳನ್ನು ತೆರೆಯಲಾಗಿದೆ. ಅಲ್ಲದೇ ಕೇರಳದಲ್ಲಿ ಸುಮಾರು 100 ಫ್ರಾಂಚೈಸಿಗಳಿಗಾಗಿ ಕೆಎಂಎಫ್‌ ಅರ್ಜಿಗಳನ್ನು ಆಹ್ವಾನಿಸಿದೆ.

ಕೇರಳದಲ್ಲಿ ನಂದಿನಿ ಉತ್ಪನ್ನಗಳ ಮಳಿಗೆಗಳನ್ನು ತೆರೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ, ಈಗಾಗಲೇ ಕೆಎಂಎಫ್ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. ಆದರೆ, ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮಣಿ ತಿಳಿಸಿದರು.

‘ಕೇರಳದಲ್ಲಿ ಹೆಚ್ಚುವರಿ ಹಾಲು ಇದ್ದಾಗಲೂ ಇತರ ರಾಜ್ಯಗಳಿಗೆ ಮಿಲ್ಮಾ ಕಾಲಿಡಲಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಕೆಎಂಎಫ್‌ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಳಿಗೆಗಳನ್ನು ತೆರೆಯುತ್ತಿರುವ ನಿರ್ಧಾರವು ಅನೈತಿಕ ಮತ್ತು ಸಹಕಾರಿ ತತ್ವಗಳಿಗೆ ವಿರುದ್ಧವಾಗಿದೆ. ಇದು ಅನಾರೋಗ್ಯಕರ ಸ್ಪರ್ಧೆಗೆ ಕಾರಣವಾಗುತ್ತದೆ’ ಎಂದು ಮಣಿ ಹೇಳಿದರು.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago