BREAKING NEWS

ಕೇರಳಕ್ಕೆ ನಂದಿನಿ : ಮಿಲ್ಮಾ ವಿರೋಧ

ತಿರುವನಂತಪುರ : ಗುಜರಾತ್‌ನ ‘ಅಮುಲ್’ ಉತ್ಪನ್ನಗಳ ಮಾರಾಟ– ಪ್ರಚಾರಕ್ಕೆ ಕರ್ನಾಟಕದಲ್ಲಿ ತೀವ್ರ ಪ್ರತಿರೋಧ ಎದುರಾಗಿರುವ ನಡುವೆ, ನಂದಿನಿ ಬ್ರಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಕೇರಳದಲ್ಲಿ ಮಳಿಗೆಗಳನ್ನು ತೆರೆಯುತ್ತಿರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ಧಾರಕ್ಕೆ ಮಿಲ್ಮಾ ಬ್ರಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸುವ ಕೇರಳ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ (ಕೆಎಂಎಂಎಫ್‌) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮಿಲ್ಮಾ ಅಧ್ಯಕ್ಷ ಕೆ.ಎಸ್. ಮಣಿ ಅವರು, ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟದ ಅಮುಲ್ ಉತ್ಪನ್ನಗಳು ಕರ್ನಾಟಕ ಪ್ರವೇಶಿಸುವುದಕ್ಕೆ ಆಕ್ಷೇಪಿಸುವ ಕೆಎಂಎಫ್‌, ಇದೇ ಸಮಯದಲ್ಲಿ ಕೇರಳದಲ್ಲಿ ನಂದಿನಿ ಮಳಿಗೆಗಳನ್ನು ತೆರೆಯುತ್ತಿರುವ ನಿಲುವನ್ನು ಪ್ರಶ್ನಿಸಿದ್ದಾರೆ.

ಕಳೆದ ಕೆಲವು ತಿಂಗಳಿಂದ ಕೇರಳದ ಮಲಪ್ಪುರಂನ ಮಂಜೇರಿಯಲ್ಲಿ ಮತ್ತು ಕೊಚ್ಚಿಯ ವೈಟ್ಟಿಲ್ಲಾದಲ್ಲಿ ನಂದಿನಿಯ ಎರಡು ಮಳಿಗೆಗಳನ್ನು ತೆರೆಯಲಾಗಿದೆ. ಅಲ್ಲದೇ ಕೇರಳದಲ್ಲಿ ಸುಮಾರು 100 ಫ್ರಾಂಚೈಸಿಗಳಿಗಾಗಿ ಕೆಎಂಎಫ್‌ ಅರ್ಜಿಗಳನ್ನು ಆಹ್ವಾನಿಸಿದೆ.

ಕೇರಳದಲ್ಲಿ ನಂದಿನಿ ಉತ್ಪನ್ನಗಳ ಮಳಿಗೆಗಳನ್ನು ತೆರೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ, ಈಗಾಗಲೇ ಕೆಎಂಎಫ್ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. ಆದರೆ, ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮಣಿ ತಿಳಿಸಿದರು.

‘ಕೇರಳದಲ್ಲಿ ಹೆಚ್ಚುವರಿ ಹಾಲು ಇದ್ದಾಗಲೂ ಇತರ ರಾಜ್ಯಗಳಿಗೆ ಮಿಲ್ಮಾ ಕಾಲಿಡಲಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಕೆಎಂಎಫ್‌ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಳಿಗೆಗಳನ್ನು ತೆರೆಯುತ್ತಿರುವ ನಿರ್ಧಾರವು ಅನೈತಿಕ ಮತ್ತು ಸಹಕಾರಿ ತತ್ವಗಳಿಗೆ ವಿರುದ್ಧವಾಗಿದೆ. ಇದು ಅನಾರೋಗ್ಯಕರ ಸ್ಪರ್ಧೆಗೆ ಕಾರಣವಾಗುತ್ತದೆ’ ಎಂದು ಮಣಿ ಹೇಳಿದರು.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago