BREAKING NEWS

ಕೇರಳಕ್ಕೆ ನಂದಿನಿ : ಮಿಲ್ಮಾ ವಿರೋಧ

ತಿರುವನಂತಪುರ : ಗುಜರಾತ್‌ನ ‘ಅಮುಲ್’ ಉತ್ಪನ್ನಗಳ ಮಾರಾಟ– ಪ್ರಚಾರಕ್ಕೆ ಕರ್ನಾಟಕದಲ್ಲಿ ತೀವ್ರ ಪ್ರತಿರೋಧ ಎದುರಾಗಿರುವ ನಡುವೆ, ನಂದಿನಿ ಬ್ರಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಕೇರಳದಲ್ಲಿ ಮಳಿಗೆಗಳನ್ನು ತೆರೆಯುತ್ತಿರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ಧಾರಕ್ಕೆ ಮಿಲ್ಮಾ ಬ್ರಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸುವ ಕೇರಳ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ (ಕೆಎಂಎಂಎಫ್‌) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮಿಲ್ಮಾ ಅಧ್ಯಕ್ಷ ಕೆ.ಎಸ್. ಮಣಿ ಅವರು, ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟದ ಅಮುಲ್ ಉತ್ಪನ್ನಗಳು ಕರ್ನಾಟಕ ಪ್ರವೇಶಿಸುವುದಕ್ಕೆ ಆಕ್ಷೇಪಿಸುವ ಕೆಎಂಎಫ್‌, ಇದೇ ಸಮಯದಲ್ಲಿ ಕೇರಳದಲ್ಲಿ ನಂದಿನಿ ಮಳಿಗೆಗಳನ್ನು ತೆರೆಯುತ್ತಿರುವ ನಿಲುವನ್ನು ಪ್ರಶ್ನಿಸಿದ್ದಾರೆ.

ಕಳೆದ ಕೆಲವು ತಿಂಗಳಿಂದ ಕೇರಳದ ಮಲಪ್ಪುರಂನ ಮಂಜೇರಿಯಲ್ಲಿ ಮತ್ತು ಕೊಚ್ಚಿಯ ವೈಟ್ಟಿಲ್ಲಾದಲ್ಲಿ ನಂದಿನಿಯ ಎರಡು ಮಳಿಗೆಗಳನ್ನು ತೆರೆಯಲಾಗಿದೆ. ಅಲ್ಲದೇ ಕೇರಳದಲ್ಲಿ ಸುಮಾರು 100 ಫ್ರಾಂಚೈಸಿಗಳಿಗಾಗಿ ಕೆಎಂಎಫ್‌ ಅರ್ಜಿಗಳನ್ನು ಆಹ್ವಾನಿಸಿದೆ.

ಕೇರಳದಲ್ಲಿ ನಂದಿನಿ ಉತ್ಪನ್ನಗಳ ಮಳಿಗೆಗಳನ್ನು ತೆರೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ, ಈಗಾಗಲೇ ಕೆಎಂಎಫ್ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. ಆದರೆ, ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮಣಿ ತಿಳಿಸಿದರು.

‘ಕೇರಳದಲ್ಲಿ ಹೆಚ್ಚುವರಿ ಹಾಲು ಇದ್ದಾಗಲೂ ಇತರ ರಾಜ್ಯಗಳಿಗೆ ಮಿಲ್ಮಾ ಕಾಲಿಡಲಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಕೆಎಂಎಫ್‌ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಳಿಗೆಗಳನ್ನು ತೆರೆಯುತ್ತಿರುವ ನಿರ್ಧಾರವು ಅನೈತಿಕ ಮತ್ತು ಸಹಕಾರಿ ತತ್ವಗಳಿಗೆ ವಿರುದ್ಧವಾಗಿದೆ. ಇದು ಅನಾರೋಗ್ಯಕರ ಸ್ಪರ್ಧೆಗೆ ಕಾರಣವಾಗುತ್ತದೆ’ ಎಂದು ಮಣಿ ಹೇಳಿದರು.

lokesh

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago