Mysore
30
scattered clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ನರೇಂದ್ರ ದಾಭೋಲ್ಕರ್‌ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಪುಣೆ ಕೋರ್ಟ್‌

ಪುಣೆ: ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಪುಣೆ ನ್ಯಾಯಾಲಯ ಇಂದು (ಮೇ. 10, ಶುಕ್ರವಾರ) ಆದೇಶ ಹೊರಡಿಸಿದೆ.

ಸುಮಾರು ಮೂರು ವರ್ಷಗಳ ವಿಚಾರಣೆ ನಂತರ ಸೆಷನ್‌ ನ್ಯಾಯಾಧೀಶರಾದ ಪಿ.ಪಿ ಜಾಧವ್‌ ಅವರು ಶುಕ್ರವಾರ ತೀರ್ಪು ಪ್ರಕಟಿಸಿದರು. ಸಚಿನ್‌ ಆಂದೋರೆ ಹಾಗೂ ಶರದ್‌ ಕಲಸ್ಕರ್‌ ಅವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಈ ಇಬ್ಬರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5 ಲಕ್ಷ ರೂ. ದಂಡ ವಿಧಿಸಿದೆ. ಡಾ. ವಿ. ರಾಜೇಂದ್ರ ಸಿಂಗ್‌ ತಾವಡೆ, ವಿಕ್ರಮ್‌ ಭಾವೆ ಮತ್ತು ಸಂಜೀವ್‌ ಪುನಲೇಕರ್‌ ಅವರ ಮೇಲಿನ ಪ್ರಕರಣವನ್ನು ಖುಲಾಸೆಗೊಳಿಸಿದೆ.

ಮಹಾರಾಷ್ಟ್ರದ ಅಂಧಶ್ರದ್ಧ ನಿರ್ಮೂಲನ್‌ ಸಮಿತಿ ಸ್ಥಾಪಕರಾಗಿದ್ದ ದಾಭೋಲ್ಕರ್‌ ಅವರನ್ನು 2013 ರಲ್ಲಿ ಪುಣೆಯ ಪಾರ್ಕ್‌ ಒಂದರಲ್ಲಿ ವಾಕಿಂಗ್‌ ಮಾಡುವ ವೇಳೆ ಗುಂಡಿಕ್ಕೆ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು 2014ರಲ್ಲಿ ಸಿಬಿಐಗೆ ಪುಣೆ ಪೊಲೀಸರಿಂದ ಹಸ್ತಾಂತರಿಸಲಾಗಿತ್ತು. ಸಿಬಿಐ 2016-19ರ ನಡುವೆ ಸನಾತನ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ೫ ಜನರ ಆರೋಪಿಗಳನ್ನು ಬಂಧಿಸಿದ್ದರು.

Tags:
error: Content is protected !!