ಪುಣೆ: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಪುಣೆ ನ್ಯಾಯಾಲಯ ಇಂದು (ಮೇ. 10, ಶುಕ್ರವಾರ) ಆದೇಶ ಹೊರಡಿಸಿದೆ.
ಸುಮಾರು ಮೂರು ವರ್ಷಗಳ ವಿಚಾರಣೆ ನಂತರ ಸೆಷನ್ ನ್ಯಾಯಾಧೀಶರಾದ ಪಿ.ಪಿ ಜಾಧವ್ ಅವರು ಶುಕ್ರವಾರ ತೀರ್ಪು ಪ್ರಕಟಿಸಿದರು. ಸಚಿನ್ ಆಂದೋರೆ ಹಾಗೂ ಶರದ್ ಕಲಸ್ಕರ್ ಅವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಈ ಇಬ್ಬರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5 ಲಕ್ಷ ರೂ. ದಂಡ ವಿಧಿಸಿದೆ. ಡಾ. ವಿ. ರಾಜೇಂದ್ರ ಸಿಂಗ್ ತಾವಡೆ, ವಿಕ್ರಮ್ ಭಾವೆ ಮತ್ತು ಸಂಜೀವ್ ಪುನಲೇಕರ್ ಅವರ ಮೇಲಿನ ಪ್ರಕರಣವನ್ನು ಖುಲಾಸೆಗೊಳಿಸಿದೆ.
ಮಹಾರಾಷ್ಟ್ರದ ಅಂಧಶ್ರದ್ಧ ನಿರ್ಮೂಲನ್ ಸಮಿತಿ ಸ್ಥಾಪಕರಾಗಿದ್ದ ದಾಭೋಲ್ಕರ್ ಅವರನ್ನು 2013 ರಲ್ಲಿ ಪುಣೆಯ ಪಾರ್ಕ್ ಒಂದರಲ್ಲಿ ವಾಕಿಂಗ್ ಮಾಡುವ ವೇಳೆ ಗುಂಡಿಕ್ಕೆ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು 2014ರಲ್ಲಿ ಸಿಬಿಐಗೆ ಪುಣೆ ಪೊಲೀಸರಿಂದ ಹಸ್ತಾಂತರಿಸಲಾಗಿತ್ತು. ಸಿಬಿಐ 2016-19ರ ನಡುವೆ ಸನಾತನ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ೫ ಜನರ ಆರೋಪಿಗಳನ್ನು ಬಂಧಿಸಿದ್ದರು.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…